ಉಡುಪಿಕಾಪುಕಾರ್ಕಳಕುಂದಾಪುರಬೈಂದೂರುಬ್ರಹ್ಮಾವರಹೆಬ್ರಿ

ದೊಡ್ಡಣಗುಡ್ಡೆಯ ಆಯುರ್ವೇದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: ತಪ್ಪಿದ ಭಾರೀ ದುರಂತ.

ಹೊರಗೆ ಓಡಿಬಂದು ಅಪಾಯದಿಂದ ಪಾರಾದ ಕಾರ್ಮಿಕರು

ಉಡುಪಿ: ದೊಡ್ಡಣಗುಡ್ಡೆ ಬಬ್ಬುಸ್ವಾಮಿ ಗುಡಿಯ ಬಳಿ ಇರುವ ಧನ್ವಂತರಿ ಆಯುರ್ವೇದ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದೆ. ಆಸ್ಪತ್ರೆಯ ಸಿಬ್ಬಂದಿ ಹಾಗೂ ಇಬ್ಬರು ಕಾರ್ಮಿಕರು ಹೊರಗೆ ಓಡಿಬಂದು ಪ್ರಾಣ ಉಳಿಸಿಕೊಂಡಿದ್ದಾರೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಇಡೀ ಕಟ್ಟಡದಲ್ಲಿ ದಟ್ಟ ಹೊಗೆ ಆವರಿಸಿದೆ. ರಿನೋವೇಷನ್ ಆಗುತ್ತಿದ್ದುದರಿಂದ ರೋಗಿಗಳು ಯಾರೂ ಇರಲಿಲ್ಲ.‌ ಇದರಿಂದ ಭಾರೀ ದುರಂತ ತಪ್ಪಿದಂತಾಗಿದೆ.

ಬೆಳಗ್ಗೆ ದೈನಂದಿನ ಕೆಲಸಕ್ಕೆ ಬರುವ ಮಹಿಳೆಯೊಬ್ಬರು ಅಡುಗೆ ಕೋಣೆಯಲ್ಲಿ ಕೆಲಸ ಪ್ರಾರಂಭಿಸುವಾಗ ಹಾಲ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿರುವ ಉಡುಪಿ ಅಗ್ನಿಶಾಮಕ ಇಲಾಖೆಯ ತಂಡ ಎರಡು ಫೈರ್ ವಾಹನಗಳನ್ನು ಬಳಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದೆ.

Related posts

ಸಾಮಾನ್ಯ ಕಾರ್ಯಕರ್ತನನ್ನು ಕಾಂಗ್ರೆಸ್ ಪಕ್ಷ ಗುರುತಿಸಿ ಟಿಕೆಟ್ ನೀಡಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Udupilive News

ನನ್ನಿಂದ ಸಾಧ್ಯವಾದಷ್ಟು ಕೆಲಸಗಳನ್ನು ಜನರಿಗೆ ಮಾಡಿಕೊಟ್ಟಿದ್ದೇನೆ.ಕೆ ವಿದ್ಯಾಕುಮಾರಿ.

Udupilive News

ರಾಜ್ಯದ ಮುಖ್ಯಮಂತ್ರಿಗಳ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದು ಬೆಂಕಿ ಹಚ್ಚಿದ ಬಿಜೆಪಿಗರ ವರ್ತನೆ ಖಂಡನೀಯ. ಪ್ರಸಾದ್ ರಾಜ್ ಕಾಂಚನ್ ಆಕ್ರೋಶ

Udupilive News

Leave a Comment