ಉಡುಪಿಕಾಪುಕಾರ್ಕಳಕುಂದಾಪುರಬೈಂದೂರುಬ್ರಹ್ಮಾವರಹೆಬ್ರಿ

ಕಾರ್ಕಳ: ಸ್ನೇಹಿತರ ಜೊತೆ ಆಡುತ್ತಿದ್ದಾಗ ಶಾಂಭವಿ ಹೊಳೆಗೆ ಬಿದ್ದು ಬಾಲಕ ಮೃತ್ಯು

ಕಾರ್ಕಳ : ಶಾಂಭವಿ ಹೊಳೆಗೆ ಬಿದ್ದು ಬಾಲಕನೋರ್ವ ಸಾವನಪ್ಪಿದ ದುರ್ಘಟನೆ ಇರ್ವತ್ತೂರಿನಲ್ಲಿ ಸಂಭವಿಸಿದೆ. ಚರಣ್ ರಾಜ್ (15) ಮೃತ ಬಾಲಕ. ಈತ ಸಾಣೂರು ಹೈಸ್ಕೂಲಿನಲ್ಲಿ 9 ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು ಸ್ನೇಹಿತರ ಜೊತೆ ಇರ್ವತ್ತೂರು ಗ್ರಾಮದ ಗೊಲ್ಲಿಂಡಿ ಎಂಬಲ್ಲಿ ಆಟವಾಡುತ್ತಿರುವಾಗ ಆಕಸ್ಮಿಕವಾಗಿ ಕಾಲು ಜಾರಿ ಶಾಂಭವಿ ಹೊಳೆಗೆ ಬಿದ್ದಿದ್ದಾನೆ. ತಕ್ಷಣವೇ ಸಾರ್ವಜನಿಕರು ನೀರಿನಿಂದ ಎತ್ತಿ ಚಿಕಿತ್ಸೆಗಾಗಿ ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿ ವೈದ್ಯರು ಪರೀಕ್ಷಿಸಿ ಚರಣ್‌ ರಾಜ್ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕಸ್ತೂರಿ ರಂಗನ್ ವರದಿ ಕರಡು ಅಧಿಸೂಚನೆಗೆ ಆಕ್ಷೇಪ – ಮಲೆನಾಡು ಕರಾವಳಿ ಒಕ್ಕೂಟದಿಂದ ಕೇಂದ್ರಕ್ಕೆ ಪತ್ರ

Udupilive News

ಮಣಿಪಾಲದ ಎರಡು ಬಾರ್ ಗಳ‌ ಲೈಸೆನ್ಸ್ ರದ್ದು ಪಡಿಸುವಂತೆ ಡಿಸಿ ಸೂಚನೆ

Udupilive News

ಖಾರ್ವಿಕೇರಿ ದೇವಸ್ಥಾನದ ಚಿನ್ನಾಭರಣ ಕಳ್ಳತನ- ದೇವಸ್ಥಾನದ ಅರ್ಚಕ ಬಂಧನ ,20 ಲಕ್ಷ ಮೌಲ್ಯದ ಚಿನ್ನಾಭರಣ ವಶ

Udupilive News

Leave a Comment