ಉಡುಪಿಕುಂದಾಪುರಬೈಂದೂರು

ಶಂಕರನಾರಾಯಣ: ಮಳೆಗೆ ಅಪಾರ ಹಾನಿ: ಮರ ಬಿದ್ದು ಕಾರಿಗೆ ಹಾನಿ

ಕುಂದಾಪುರ: ಸೋಮವಾರ ರಾತ್ರಿಯ ಭಾರೀ ಗಾಳಿ – ಮಳೆಗೆ ಶಂಕರನಾರಾಯಣ ಗ್ರಾಮದ ಹಲವೆಡೆ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಮಾವಿನಕೊಡ್ಲುವಿನ ಯುವಕನೊಬ್ಬನಿಗೆ ಸಿಡಿಲು ಬಡಿದು ಗಾಯಗೊಂಡ ಘಟನೆ ನಡೆದಿದೆ.

ಶಂಕನರಾಯಣ ಗ್ರಾಮದ ಅರಣ್ಯ ಇಲಾಖೆಯ ಅಧಿಕಾರಿಗಳ ಕಚೇರಿ ಬಳಿ ನಿಲ್ಲಿಸಿದ್ದ ಸ್ಥಳೀಯ ಹೊಟೇಲ್‌ ಮಾಲಕ ಮನೀಶ್‌ ಶೆಟ್ಟಿಯವರ ಕಾರಿನ ಮೇಲೆ ಬೃಹತ್‌ ಗಾತ್ರದ ಮರ ಬಿದ್ದು, ಕಾರು ಸಂಪೂರ್ಣ ಜಖಂಗೊಂಡಿದೆ.

ಅದೃಷ್ಟವಶಾತ್‌ ಕಾರಿನಲ್ಲಿ ಯಾರೂ ಇರದಿದ್ದ ಕಾರಣ, ಯಾವುದೇ ಅಪಾಯ ಸಂಭವಿಸಿಲ್ಲ. ಹೊಟೇಲ್‌ನ ನಾಮಫಲಕಕ್ಕೆ ಹಾನಿಯಾಗಿದೆ. ಮರ ರಸ್ತೆ ಬದಿಯ ವಿದ್ಯುತ್‌ ತಂತಿಗಳ ಮೇಲೂ ಬಿದ್ದ ಪರಿಣಾಮ ಕಂಬಗಳು ಧರೆಗುರುಳಿವೆ

Related posts

ನ.9ರಂದು ಉಡುಪಿಯಲ್ಲಿ “ನನ್ನ ನಾಡು ನನ್ನ ಹಾಡು” ಜಿಲ್ಲಾಮಟ್ಟದ ಕನ್ನಡ ಹಾಡುಗಳ ಸ್ಪರ್ಧೆ

Udupilive News

ಇಂದು ಉಡುಪಿ ಸೇರಿದಂತೆ ರಾಜ್ಯದ ವಿವಿಧೆಡೆ ಭಾರಿ ಮಳೆ ಸಾಧ್ಯತೆ

Udupilive News

ಕೊಲ್ಲೂರು: ಕಾಂತಾರ ಚಿತ್ರದ ಕಲಾವಿದರಿದ್ದ ಬಸ್ ಪಲ್ಟಿ: ಹಲವು ಮಂದಿಗೆ ಗಾಯ

Udupilive News

Leave a Comment