ಉಡುಪಿಕುಂದಾಪುರಬೈಂದೂರು

ಶಂಕರನಾರಾಯಣ: ಮಳೆಗೆ ಅಪಾರ ಹಾನಿ: ಮರ ಬಿದ್ದು ಕಾರಿಗೆ ಹಾನಿ

ಕುಂದಾಪುರ: ಸೋಮವಾರ ರಾತ್ರಿಯ ಭಾರೀ ಗಾಳಿ – ಮಳೆಗೆ ಶಂಕರನಾರಾಯಣ ಗ್ರಾಮದ ಹಲವೆಡೆ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಮಾವಿನಕೊಡ್ಲುವಿನ ಯುವಕನೊಬ್ಬನಿಗೆ ಸಿಡಿಲು ಬಡಿದು ಗಾಯಗೊಂಡ ಘಟನೆ ನಡೆದಿದೆ.

ಶಂಕನರಾಯಣ ಗ್ರಾಮದ ಅರಣ್ಯ ಇಲಾಖೆಯ ಅಧಿಕಾರಿಗಳ ಕಚೇರಿ ಬಳಿ ನಿಲ್ಲಿಸಿದ್ದ ಸ್ಥಳೀಯ ಹೊಟೇಲ್‌ ಮಾಲಕ ಮನೀಶ್‌ ಶೆಟ್ಟಿಯವರ ಕಾರಿನ ಮೇಲೆ ಬೃಹತ್‌ ಗಾತ್ರದ ಮರ ಬಿದ್ದು, ಕಾರು ಸಂಪೂರ್ಣ ಜಖಂಗೊಂಡಿದೆ.

ಅದೃಷ್ಟವಶಾತ್‌ ಕಾರಿನಲ್ಲಿ ಯಾರೂ ಇರದಿದ್ದ ಕಾರಣ, ಯಾವುದೇ ಅಪಾಯ ಸಂಭವಿಸಿಲ್ಲ. ಹೊಟೇಲ್‌ನ ನಾಮಫಲಕಕ್ಕೆ ಹಾನಿಯಾಗಿದೆ. ಮರ ರಸ್ತೆ ಬದಿಯ ವಿದ್ಯುತ್‌ ತಂತಿಗಳ ಮೇಲೂ ಬಿದ್ದ ಪರಿಣಾಮ ಕಂಬಗಳು ಧರೆಗುರುಳಿವೆ

Related posts

ದೊಡ್ಡಣಗುಡ್ಡೆಯ ಆಯುರ್ವೇದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: ತಪ್ಪಿದ ಭಾರೀ ದುರಂತ.

Udupilive News

ಕೇಬಲ್‌ ಟಿವಿ ಸೆಟ್ ಅಪ್ ಬಾಕ್ಸ್ ಉಚಿತ ಹೆಸರಲ್ಲಿ ನಡೆಯುತ್ತಿದೆಯಾ..ವಂಚನೆ ? ಗ್ರಾಹಕರೇ ಎಚ್ಚರ.

Udupilive News

ಉಡುಪಿ: ಜೂ‌ನ್ 15ರಂದು ನೇತ್ರದಾನ- ನೇತ್ರದಾನ ಜಾಗೃತಿ ಶಿಬಿರ

Udupilive News

Leave a Comment