ಉಡುಪಿಕುಂದಾಪುರಬೈಂದೂರು

ಶಂಕರನಾರಾಯಣ: ಮಳೆಗೆ ಅಪಾರ ಹಾನಿ: ಮರ ಬಿದ್ದು ಕಾರಿಗೆ ಹಾನಿ

ಕುಂದಾಪುರ: ಸೋಮವಾರ ರಾತ್ರಿಯ ಭಾರೀ ಗಾಳಿ – ಮಳೆಗೆ ಶಂಕರನಾರಾಯಣ ಗ್ರಾಮದ ಹಲವೆಡೆ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಮಾವಿನಕೊಡ್ಲುವಿನ ಯುವಕನೊಬ್ಬನಿಗೆ ಸಿಡಿಲು ಬಡಿದು ಗಾಯಗೊಂಡ ಘಟನೆ ನಡೆದಿದೆ.

ಶಂಕನರಾಯಣ ಗ್ರಾಮದ ಅರಣ್ಯ ಇಲಾಖೆಯ ಅಧಿಕಾರಿಗಳ ಕಚೇರಿ ಬಳಿ ನಿಲ್ಲಿಸಿದ್ದ ಸ್ಥಳೀಯ ಹೊಟೇಲ್‌ ಮಾಲಕ ಮನೀಶ್‌ ಶೆಟ್ಟಿಯವರ ಕಾರಿನ ಮೇಲೆ ಬೃಹತ್‌ ಗಾತ್ರದ ಮರ ಬಿದ್ದು, ಕಾರು ಸಂಪೂರ್ಣ ಜಖಂಗೊಂಡಿದೆ.

ಅದೃಷ್ಟವಶಾತ್‌ ಕಾರಿನಲ್ಲಿ ಯಾರೂ ಇರದಿದ್ದ ಕಾರಣ, ಯಾವುದೇ ಅಪಾಯ ಸಂಭವಿಸಿಲ್ಲ. ಹೊಟೇಲ್‌ನ ನಾಮಫಲಕಕ್ಕೆ ಹಾನಿಯಾಗಿದೆ. ಮರ ರಸ್ತೆ ಬದಿಯ ವಿದ್ಯುತ್‌ ತಂತಿಗಳ ಮೇಲೂ ಬಿದ್ದ ಪರಿಣಾಮ ಕಂಬಗಳು ಧರೆಗುರುಳಿವೆ

Related posts

ಕಂಬಳ ಪ್ರೇಮಿಗಳಿಗೆ ಸಿಹಿಸುದ್ದಿ .ಈ ಬಾರಿಯ ಕಂಬಳ ವೇಳಾಪಟ್ಟಿ ಬಿಡುಗಡೆ

Udupilive News

ಉಡುಪಿ: ಬೈಕ್ ಗೆ ಕಾರು ಡಿಕ್ಕಿ; ಕಾಲೇಜು ವಿದ್ಯಾರ್ಥಿ ಮೃತ್ಯು

Udupilive News

ಬಿಜೆಪಿ‌‌ ಏಜೆಂಟ್ ಆಗಿರುವ ಚುನಾವಣಾ ಆಯೋಗ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ‌ಟೀಕೆ

Udupilive News

Leave a Comment