ಉಡುಪಿಕುಂದಾಪುರಬೈಂದೂರು

ಶಂಕರನಾರಾಯಣ: ಮಳೆಗೆ ಅಪಾರ ಹಾನಿ: ಮರ ಬಿದ್ದು ಕಾರಿಗೆ ಹಾನಿ

ಕುಂದಾಪುರ: ಸೋಮವಾರ ರಾತ್ರಿಯ ಭಾರೀ ಗಾಳಿ – ಮಳೆಗೆ ಶಂಕರನಾರಾಯಣ ಗ್ರಾಮದ ಹಲವೆಡೆ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಮಾವಿನಕೊಡ್ಲುವಿನ ಯುವಕನೊಬ್ಬನಿಗೆ ಸಿಡಿಲು ಬಡಿದು ಗಾಯಗೊಂಡ ಘಟನೆ ನಡೆದಿದೆ.

ಶಂಕನರಾಯಣ ಗ್ರಾಮದ ಅರಣ್ಯ ಇಲಾಖೆಯ ಅಧಿಕಾರಿಗಳ ಕಚೇರಿ ಬಳಿ ನಿಲ್ಲಿಸಿದ್ದ ಸ್ಥಳೀಯ ಹೊಟೇಲ್‌ ಮಾಲಕ ಮನೀಶ್‌ ಶೆಟ್ಟಿಯವರ ಕಾರಿನ ಮೇಲೆ ಬೃಹತ್‌ ಗಾತ್ರದ ಮರ ಬಿದ್ದು, ಕಾರು ಸಂಪೂರ್ಣ ಜಖಂಗೊಂಡಿದೆ.

ಅದೃಷ್ಟವಶಾತ್‌ ಕಾರಿನಲ್ಲಿ ಯಾರೂ ಇರದಿದ್ದ ಕಾರಣ, ಯಾವುದೇ ಅಪಾಯ ಸಂಭವಿಸಿಲ್ಲ. ಹೊಟೇಲ್‌ನ ನಾಮಫಲಕಕ್ಕೆ ಹಾನಿಯಾಗಿದೆ. ಮರ ರಸ್ತೆ ಬದಿಯ ವಿದ್ಯುತ್‌ ತಂತಿಗಳ ಮೇಲೂ ಬಿದ್ದ ಪರಿಣಾಮ ಕಂಬಗಳು ಧರೆಗುರುಳಿವೆ

Related posts

ಜನಸಾಮಾನ್ಯರ ಕೆಲಸಕಾರ್ಯಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಿ : ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಮೀ ಆರ್ ಹೆಬ್ಬಾಳಕರ್

Udupilive News

ಮಗುವಿನ ಮೇಲೆ ದೌರ್ಜನ್ಯ ಎಸಗಿದ ಅರೋಪಿಯಿಂದ ಪೊಲೀಸರ ಮೇಲೆ ಅಟ್ಯಾಕ್

Udupilive News

ಯುವ ಜನರು ಸ್ವಯಂ ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು: ವಾರ್ತಾಧಿಕಾರಿ ಮಂಜುನಾಥ್ ಬಿ

Udupilive News

Leave a Comment