ಉಡುಪಿಕುಂದಾಪುರಬೈಂದೂರು

ಶಂಕರನಾರಾಯಣ: ಮಳೆಗೆ ಅಪಾರ ಹಾನಿ: ಮರ ಬಿದ್ದು ಕಾರಿಗೆ ಹಾನಿ

ಕುಂದಾಪುರ: ಸೋಮವಾರ ರಾತ್ರಿಯ ಭಾರೀ ಗಾಳಿ – ಮಳೆಗೆ ಶಂಕರನಾರಾಯಣ ಗ್ರಾಮದ ಹಲವೆಡೆ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಮಾವಿನಕೊಡ್ಲುವಿನ ಯುವಕನೊಬ್ಬನಿಗೆ ಸಿಡಿಲು ಬಡಿದು ಗಾಯಗೊಂಡ ಘಟನೆ ನಡೆದಿದೆ.

ಶಂಕನರಾಯಣ ಗ್ರಾಮದ ಅರಣ್ಯ ಇಲಾಖೆಯ ಅಧಿಕಾರಿಗಳ ಕಚೇರಿ ಬಳಿ ನಿಲ್ಲಿಸಿದ್ದ ಸ್ಥಳೀಯ ಹೊಟೇಲ್‌ ಮಾಲಕ ಮನೀಶ್‌ ಶೆಟ್ಟಿಯವರ ಕಾರಿನ ಮೇಲೆ ಬೃಹತ್‌ ಗಾತ್ರದ ಮರ ಬಿದ್ದು, ಕಾರು ಸಂಪೂರ್ಣ ಜಖಂಗೊಂಡಿದೆ.

ಅದೃಷ್ಟವಶಾತ್‌ ಕಾರಿನಲ್ಲಿ ಯಾರೂ ಇರದಿದ್ದ ಕಾರಣ, ಯಾವುದೇ ಅಪಾಯ ಸಂಭವಿಸಿಲ್ಲ. ಹೊಟೇಲ್‌ನ ನಾಮಫಲಕಕ್ಕೆ ಹಾನಿಯಾಗಿದೆ. ಮರ ರಸ್ತೆ ಬದಿಯ ವಿದ್ಯುತ್‌ ತಂತಿಗಳ ಮೇಲೂ ಬಿದ್ದ ಪರಿಣಾಮ ಕಂಬಗಳು ಧರೆಗುರುಳಿವೆ

Related posts

ಮಂಗಳೂರು: ಕಾರು ಅಫಘಾತ ಫೋಟೊಗ್ರಾಫರ್ ಸಾವು

Udupilive News

ಉಡುಪಿಯಲ್ಲಿ ಲವ್ ಜಿಹಾದ್? ಇಸ್ಲಾಂಗೆ ಕನ್ವರ್ಟ್ ಆಗುವಂತೆ ವಿದ್ಯಾರ್ಥಿನಿಗೆ ಕಿರುಕುಳ ಆರೋಪ : ವೈದ್ಯ ಅರೆಸ್ಟ್!

Udupilive News

ದುಬೈನ ಫಾರ್ಚ್ಯೂನ್ ಸಂಸ್ಥೆಗೆ 2.5 ಕೋಟಿ ವಂಚಿಸಿ‌ ಬಂಧನಕ್ಕೊಳಗಾಗಿದ್ದ ಆರೋಪಿಯ ಜಾಮೀನು ಅರ್ಜಿ ತಿರಸ್ಕೃತ

Udupilive News

Leave a Comment