ಉಡುಪಿಕಾಪುಕಾರ್ಕಳಕುಂದಾಪುರಬೈಂದೂರುಬ್ರಹ್ಮಾವರಹೆಬ್ರಿ

ಕುಂದಾಪುರ: ರೈಲು ಡಿಕ್ಕಿಯಾಗಿ ಚಿರತೆ ಸಾವು

ಕುಂದಾಪುರ: ರೈಲು ಡಿಕ್ಕಿಯಾಗಿ ಚಿರತೆಯೊಂದು ಸಾವನ್ನಪ್ಪಿದ ಘಟನೆ ನಾಡ ಗ್ರಾಮದ ಬಡಾಕೆರೆಯ ಸೌಪರ್ಣಿಕ ನದಿಗೆ ನಿರ್ಮಿಸಲಾದ ರೈಲ್ವೇ ಮೇಲ್ಸೇತುವೆಯಲ್ಲಿ ಸಂಭವಿಸಿದೆ.

ಸುಮಾರು 5 ವರ್ಷದ ಗಂಡು ಚಿರತೆಯು ಅರಣ್ಯದಿಂದ ಆಹಾರ ಅರಸಿಕೊಂಡು ಬಂದು ರೈಲ್ವೆ ಹಳಿ ದಾಟುವಾಗ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.

ಸ್ಥಳೀಯರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಕುಂದಾಪುರ ವಲಯ ಅರಣ್ಯಾಧಿಕಾರಿ ಹಾಗೂ ಸಿಬಂದಿ ಚಿರತೆಯ ಕಳೇಬರ ವಶಕ್ಕೆ ಪಡೆದು, ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಬಳಿಕ ಚಿರತೆಯ ಕಳೇಬರವನ್ನು ದಹನ ಮಾಡಲಾಯಿತು.

Related posts

ವಿಧಾನ ಪರಿಷತ್ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಗೆ ಜಯ

Udupilive News

ಬಾಕ್ಸಿಂಗ್ ಚ್ಯಾಂಪಿಯನ್ ಶಿಪ್ ನಲ್ಲಿ ಕಂಚಿನ ಪದಕ ಪಡೆದ ಮಾನ್ಸಿ ಜೆ ಸುವರ್ಣ, ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘನೆ

Udupilive News

ಪೇಜಾವರ ಶ್ರೀಗಳ ಬಗ್ಗೆ ಲಘುವಾಗಿ ಮಾತನಾಡಿದ್ದು ಹಿಂದೂ ಸಮಾಜಕ್ಕೆ ನೋವು ತಂದಿದೆ; ಸಂಸದ ಕೋಟ ಶ್ರೀನಿವಾಸ ಪೂಜಾರಿ

Udupilive News

Leave a Comment