ಉಡುಪಿಕಾಪುಕಾರ್ಕಳಕುಂದಾಪುರಬೈಂದೂರುಬ್ರಹ್ಮಾವರಹೆಬ್ರಿ

ಕುಂದಾಪುರ: ರೈಲು ಡಿಕ್ಕಿಯಾಗಿ ಚಿರತೆ ಸಾವು

ಕುಂದಾಪುರ: ರೈಲು ಡಿಕ್ಕಿಯಾಗಿ ಚಿರತೆಯೊಂದು ಸಾವನ್ನಪ್ಪಿದ ಘಟನೆ ನಾಡ ಗ್ರಾಮದ ಬಡಾಕೆರೆಯ ಸೌಪರ್ಣಿಕ ನದಿಗೆ ನಿರ್ಮಿಸಲಾದ ರೈಲ್ವೇ ಮೇಲ್ಸೇತುವೆಯಲ್ಲಿ ಸಂಭವಿಸಿದೆ.

ಸುಮಾರು 5 ವರ್ಷದ ಗಂಡು ಚಿರತೆಯು ಅರಣ್ಯದಿಂದ ಆಹಾರ ಅರಸಿಕೊಂಡು ಬಂದು ರೈಲ್ವೆ ಹಳಿ ದಾಟುವಾಗ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.

ಸ್ಥಳೀಯರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಕುಂದಾಪುರ ವಲಯ ಅರಣ್ಯಾಧಿಕಾರಿ ಹಾಗೂ ಸಿಬಂದಿ ಚಿರತೆಯ ಕಳೇಬರ ವಶಕ್ಕೆ ಪಡೆದು, ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಬಳಿಕ ಚಿರತೆಯ ಕಳೇಬರವನ್ನು ದಹನ ಮಾಡಲಾಯಿತು.

Related posts

ಅ.29ರಂದು ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿ ವಿಳಂಬ ವಿರೋಧಿಸಿ ಬೃಹತ್ ಪ್ರತಿಭಟನೆ

Udupilive News

ಶೋಭಾ ಕರಂದ್ಲಾಜೆ ಕುರಿತು ಮಾತನಾಡುವ ನೈತಿಕತೆ ಹೆಬ್ಬಾಳ್ಕರ್ ಗೆ ಇಲ್ಲ : ಶ್ರೀ ನಿಧಿ ಹೆಗ್ಡೆ.

Udupilive News

ಕಾರ್ಕಳ: ಕರಿಮಣಿ ಮಾಲೀಕ ನೀನಲ್ಲ ಅಂತಾ ಗಂಡನ ಜೊತೆ ರೀಲ್ಸ್  ಮಾಡಿದವಳು ,ಬಾಯ್ ಫ್ರೆಂಡ್ ಜೊತೆ ಸೇರಿ  ಕೊಂದೇ ಬಿಟ್ಟಳು.

Udupilive News

Leave a Comment