ದಕ್ಷಿಣ ಕನ್ನಡಪುತ್ತೂರು-ಸುಳ್ಯಬೆಳ್ತಂಗಡಿ-ಬಂಟ್ವಾಳಮಂಗಳೂರುಮೂಲ್ಕಿ-ಮೂಡುಬಿದ್ರಿ

ಮುಲ್ಕಿ: ಮನೆಯ ಅಡುಗೆ ಕೋಣೆಗೆ ನುಗ್ಗಿದ ಚಿರತೆ – ಬೆಚ್ಚಿಬಿದ್ದ ಮನೆಮಂದಿ.!

ಮಂಗಳೂರು: ಮನೆಯ ಅಡುಗೆ ಕೋಣೆಗೆ ಚಿರತೆಯೊಂದು ನುಗ್ಗಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಹೊರವಲಯದ ಮುಲ್ಕಿಯಲ್ಲಿ ನಡೆದಿದೆ.

ಮುಲ್ಕಿಯ ಅಕ್ಕಸಾಲಿಗರ ಕೇರಿ ಬಳಿಯ ಸದಾನಂದ ಕೋಟ್ಯಾನ್ ಎಂಬವರ ಮನೆಯ ಅಡುಗೆ ಕೋಣೆಗೆ ಸುಮಾರು ಒಂದು ವರ್ಷ ಪ್ರಾಯದ ಚಿರತೆ ನುಗ್ಗಿದೆ.
ಈ ವೇಳೆ ನಾಯಿ ಬೊಗಳಲು ಆರಂಭಿಸಿದ್ದು, ಮನೆಮಂದಿ ಚಿರತೆ ನೋಡಿ ಬೆಚ್ಚಿಬಿದ್ದಿದ್ದಾರೆ.

ಕೂಡಲೇ ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದ್ದು, ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಅಧಿಕಾರಿಗಳು ಅಡುಗೆ ಮನೆಯ ಮುಂಭಾಗ ಬಾಗಿಲಿಗೆ ಬೋನ್ ಅಳವಡಿಸಿ ಸುಮಾರು 5 ಗಂಟೆಗಳ ಕಾರ್ಯಾಚರಣೆ ಬಳಿಕ ಚಿರತೆ ಬೋನಿನೊಳಗೆ ಬಿದ್ದಿದೆ.

Related posts

ಕಂಬಳ ಪ್ರೇಮಿಗಳಿಗೆ ಸಿಹಿಸುದ್ದಿ .ಈ ಬಾರಿಯ ಕಂಬಳ ವೇಳಾಪಟ್ಟಿ ಬಿಡುಗಡೆ

Udupilive News

ಉಡುಪಿಯ ಟೈಮ್ಸ್ ಸ್ಕ್ವೇರ್ ಮಾಲ್ ನಲ್ಲಿ ‘ದಿ ಓಷಿಯನ್ ಪರ್ಲ್ ಟೈಮ್ಸ್ ಸ್ಕ್ವೇರ್’ ಹೋಟೆಲ್ ಶುಭಾರಂಭ

Udupilive News

ದಕ್ಷಿಣ ಕನ್ನಡ ಜಿಲ್ಲೆಗೆ ಇಬ್ಬರು ಖಡಕ್ ಐ.ಪಿ.ಎಸ್ ಅಧಿಕಾರಿಗಳ ನೇಮಕ….!! ಯಾರು ಈ ಖಡಕ್ ಐ.ಪಿ.ಎಸ್ ಅಧಿಕಾರಿಗಳು…??

Udupilive News

Leave a Comment