ಉಡುಪಿ

ರಾಡ್ ಹಿಡಿದು ತಿರುಗಾಡುತ್ತಿದ್ದ ಮಾನಸಿಕ ಅಸ್ವಸ್ಥ ಗುಣಮುಖ* :*ವಾರಸುದಾರರ ಪತ್ತೆಗೆ ಸೂಚನೆ

ಉಡುಪಿ : ಪೆರ್ಡೂರಿನ ಸಾರ್ವಜನಿಕ ಸ್ಥಳದಲ್ಲಿ 5 ತಿಂಗಳ ಹಿಂದೆ ಕಬ್ಬಿಣದ ರಾಡ್ ಹಿಡಿದು ತಿರುಗಾಡುತ್ತಾ ಆತಂಕ ಸೃಷ್ಟಿಸಿದ್ದ ವ್ಯಕ್ತಿಯನ್ನು ಸಮಾಜ ಸೇವಕ ವಿಶು ಶೆಟ್ಟಿ ಅವರು ಸ್ಥಳೀಯರ ಸಹಾಯದಿಂದ ವಶಕ್ಕೆ ಪಡೆದು ಮಂಜೇಶ್ವರದ ದೈಗುಳಿಯಮಾನಸಿಕ ಅಸ್ವಸ್ಥರ ಪುನರ್ವಸತಿ ಕೇಂದ್ರ ಶ್ರೀ ಸಾಯಿ ಸೇವಾಶ್ರಮಕ್ಕೆ ದಾಖಲಿಸಿದ್ದು, ಇದೀಗ ವ್ಯಕ್ತಿ ಗುಣಮುಖರಾಗಿ ತನ್ನ ಕುಟುಂಬವನ್ನು ಸೇರಲು ಹಂಬಲಿಸುತ್ತಿದ್ದಾರೆ.

ವ್ಯಕ್ತಿಯ ಹೆಸರು ಆನಂದ (48) ಎಂದಾಗಿದ್ದು, ತನ್ನ ಸಂಬಂಧಿಕರು ಪೆರ್ಡೂರು ಶಿವಪುರ ಪರಿಸರದಲ್ಲಿ ವಾಸವಾಗಿದ್ದಾರೆ ಎಂಬ ಮಾಹಿತಿ ನೀಡಿದ್ದಾರೆ.
ವ್ಯಕ್ತಿ ಸಹಜ ಸ್ಟಿತಿಗೆ ಬಂದಿರುವುದರಿಂದ ಅವರನ್ನು ಆಶ್ರಮದಿಂದ ಬಿಡುಗಡೆಗೊಳಿಸುವಂತೆ ವೈದ್ಯರು ಸೂಚಿಸಿದ್ದಾರೆ. ಹೀಗಾಗಿ ಸಂಬಂಧಿಕರು ತುರ್ತಾಗಿ ಆಶ್ರಮ ಅಥವಾ ತನ್ನನ್ನು ಸಂಪರ್ಕಿಸುವಂತೆ ವಿಶು ಶೆಟ್ಟಿ ವಿನಂತಿಸಿದ್ದಾರೆ.

ಆನಂದ ಅವರು ಮಾನಸಿಕ ಕ್ಷೋಭೆಗೆ ಒಳಗಾಗಿ
ದೂಪದಕಟ್ಟೆ ಗ್ರಾಮೀಣ ಪ್ರದೇಶದಲ್ಲಿ ರಾತ್ರಿ ಹಗಲು ತಿರುಗಾಡುತ್ತಾ ಆತಂಕ ಸೃಷ್ಟಿಸಿದ್ದರು.. ಈ ಬಗ್ಗೆ ಸ್ಥಳೀಯರು ವಿಶು ಶೆಟ್ಟಿಯವರಿಗೆ ಮಾಹಿತಿ ನೀಡಿದ್ದರು. ವಿಶು ಶೆಟ್ಟಿ ಅವರು ಸ್ಥಳೀಯರಾದ ಸತೀಶ್ ಆಚಾರ್ಯ ಮತ್ತಿತರರ ನೆರವಿನೊಂದಿಗೆ ವ್ಯಕ್ತಿಯನ್ನು ವಶಕ್ಕೆ ಪಡೆದು ಕಳೆದ ಮೇ ತಿಂಗಳಲ್ಲಿ ಮಂಜೇಶ್ವರದ ದೈಗುಳಿ ಸಾಯಿ ಸೇವಾಶ್ರಮಕ್ಕೆ ದಾಖಲಿಸಿದ್ದರು
. ಈ ಬಗ್ಗೆ ಹಿರಿಯಡಕ ಪೊಲೀಸ್ ಠಾಣೆಯಲ್ಲಿ ಕಾನೂನು ಪ್ರಕ್ರಿಯೆ ನಡೆಸಲಾಗಿತ್ತು.
ಸುಮಾರು 5 ತಿಂಗಳ ಕಾಲ ಆಶ್ರಮದ ಡಾ.ಉದಯ ಕುಮಾರ್ ದಂಪತಿಯ ಚಿಕಿತ್ಸೆ ಹಾಗೂ ಆರೈಕೆಯಿಂದ ವ್ಯಕ್ತಿ ಚೇತರಿಸಿಕೊಂಡು ಇದೀಗ ತನ್ನ ಸಂಬಂಧಿಕರನ್ನು ಸೇರಲು ಉತ್ಸುಕರಾಗಿದ್ದಾರೆ.

ಆನಂದ ಅವರಿಗೆ ಪುನರ್ಜನ್ಮ ನೀಡಿದ ಆಶ್ರಮದ ಡಾ.ಉದಯ ಕುಮಾರ್ ದಂಪತಿಗೆ ವಿಶು ಶೆಟ್ಟಿ ಕೃತಜ್ಞತೆ ಸಲ್ಲಿಸಿದ್ದಾರೆ.

Related posts

ರಾಜ್ಯದ ಮುಖ್ಯಮಂತ್ರಿಗಳ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದು ಬೆಂಕಿ ಹಚ್ಚಿದ ಬಿಜೆಪಿಗರ ವರ್ತನೆ ಖಂಡನೀಯ. ಪ್ರಸಾದ್ ರಾಜ್ ಕಾಂಚನ್ ಆಕ್ರೋಶ

Udupilive News

ಜೂ.23ರಂದು ದ.ಕ ಮತ್ತು ಉಡುಪಿ ಜಿಲ್ಲೆಯ 399 ಸ್ಥಳಗಳಲ್ಲಿ ಏಕಕಾಲದಲ್ಲಿ ಬಿಜೆಪಿ ಧರಣಿ.

Udupilive News

ಧರ್ಮಸ್ಥಳ ಕ್ಷೇತ್ರದ ಗೌರವ ಹಾಗು ಘನತೆಯನ್ನು ಕುಗ್ಗಿಸಲೆತ್ನಿಸುತ್ತಿರುವುದು ಅಕ್ಷಮ್ಯ ಅಪರಾಧ – ವಿಶ್ವ ಹಿಂದೂ ಪರಿಷದ್

Udupilive News

Leave a Comment