ರಾಜ್ಯ

ದೀಪಾವಳಿಗೆ ಟಿಕೆಟ್ ದರ ಭಾರಿ ಏರಿಕೆ : ಖಾಸಗಿ ಬಸ್ ಮಾಲೀಕರಿಂದ ರಾಜಾರೋಷವಾಗಿ ಸುಲಿಗೆ.

ಬೆಂಗಳೂರು:ದೀಪಾವಳಿ ಹಬ್ಬಕ್ಕೆ ತಮ ಊರಿಗೆ ತೆರಳಲು ಮುಂದಾಗಿದ್ದ ಜನರಿಗೆ ಕೆಲ ಖಾಸಗಿ ಬಸ್ ಕಂಪನಿಗಳು ಏಕಾಏಕಿ ಟಿಕೆಟ್ ದರ ಹೆಚ್ಚಿಸಿ ಶಾಕ್ ನೀಡಿದೆ.ಹಬ್ಬದ ಹಿಂದಿನ ದಿನ ಖಾಸಗಿ ಬಸ್ಗಳ ಸೀಟ್ಗಳೆಲ್ಲಾ ಬಹುತೇಕ ಬುಕ್ ಆಗಿದ್ದು ಕೆಲ ಬಸಿನಲ್ಲಿ ಮಾತ್ರ ಸೀಟುಗಳಿದ್ಧು ಇದರ ಲಾಭ ಪಡೆಯಲು ದರ ಹೆಚ್ಚಳ ಮಾಡಲಾಗುತ್ತಿದೆ.

ಇದನ್ನ ಮನಗೊಂಡ ಸಾರಿಗೆ ಇಲಾಖೆ ಖಾಸಗಿ ಸಾರಿಗೆ ಕಂಪನಿಗಳಿಗೆ ಎಚ್ಚರಿಕೆ ನೀಡಿದೆ.ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ, 2 ಶನಿವಾರ ಹಾಗೂ 3 ರಂದು ಭಾನುವಾರ ಮೂರು ದಿನ ಹಬ್ಬ ಹಾಗೂ ರಜೆ ಇರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನ ಊರುಗಳತ್ತ ಮುಖ ಮಾಡಿದ್ದಾರೆ
ಪ್ರಯಾಣಿಕರ ಬೇಡಿಕೆ ಬರುವ ಸಾಧ್ಯತೆ ಇರುವುದರಿಂದ ಖಾಸಗಿ ಬಸ್ಗಳು ಹಬ್ಬ ಸಮೀಪದ ದಿನಗಳಲ್ಲಿ ಟಿಕೆಟ್ ದರ ದುಪ್ಪಟ್ಟು ಮಾಡುವ ಸಾಧ್ಯತೆ ಇದ್ದು, ಹೀಗಾಗಿ ಖಾಸಗಿ ಬಸ್ಗಳಿಗೆ ಸಾರಿಗೆ ಇಲಾಖೆ ಖಡಕ್ ಎಚ್ಚರಿಕೆ ಕೊಟ್ಟಿದೆ.

Related posts

ರಾಜ್ಯದಲ್ಲಿ ಕೊರೋನಾ ದಿಢೀರ್ ಹೆಚ್ಚಳ; ಇಂದು 265 ಮಂದಿಗೆ ಪಾಸಿಟಿವ್

Udupilive News

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಗೆಲುವು. ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ‘ಉಡುಗೊರೆ’ಎಂದ ವಿಜಯೇಂದ್ರ

Udupilive News

ಪ್ರತಿಷ್ಟಿತ ಭಾರತ್ ಬ್ಯಾಂಕಿಗೆ ಬೆಸ್ಟ್ ಹೆಚ್ ಅರ್ ಮ್ಯಾನೇಜ್ಮೆಂಟ್ ಅವಾರ್ಡ್

Udupilive News

Leave a Comment