ಉಡುಪಿ

ಶ್ರೀ ಕೃಷ್ಣ ಮಠದಲ್ಲಿ ಪಶ್ಚಿಮ ಜಾಗರ ಪೂಜೆಯಲ್ಲಿ ಭಾಗವಹಿಸಿದ ಬಾಬಾ ರಾಮದೇವ್ ಜೀ.

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಒಂದು ತಿಂಗಳ ಕಾಲ ಯೋಗ ನಿದ್ರೆಯಿಂದ ಭಗವಂತನನ್ನು ಎಬ್ಬಿಸುವ ಪಶ್ಚಿಮ ಜಾಗರ ಪೂಜೆಯಲ್ಲಿ ಬಾಬಾ ರಾಮದೇವ್ ರವರು ಪಾಲ್ಗೊಂಡಿದ್ದರು. ಶ್ರೀ ಕೃಷ್ಣ ಮಠದ ಗರ್ಭ ಗುಡಿಯ ಸುತ್ತಲೂ ದೀಪಗಳನ್ನು ಬೆಳಗಲಾಯಿತು. ಬಾಬಾ ರಾಮದೇವ್ ದೀಪವನ್ನು ಬೆಳಗಿಸಿ ದೀಪೋತ್ಸವ ಚಾಲನೆಯನ್ನು ನೀಡಿದರು.ಪುತ್ತಿಗೆ ಮಠದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಶ್ರೀ ಕೃಷ್ಣನಿಗೆ ಪೂಜೆಯನ್ನು ಮಾಡಿದರು. ಗರ್ಭಗುಡಿಯ ಸುತ್ತಲೂ ದೀಪದ ಬೆಳಕಿನಲ್ಲಿ ವಾದ್ಯ ಸೇವೆಗಳೊಂದಿಗೆ ಪಶ್ಚಿಮ ಜಾಗರ ಪೂಜೆಯು ವೈಭವದಿಂದ ನಡೆಯಿತು. ನಂತರ ರಾಜಾಂಗಣದಲ್ಲಿ ನಡೆದ ವಿಶೇಷ ಯೋಗ ಜ್ಞಾನ ಪ್ರಾಣ ಶಿಬಿರದಲ್ಲಿ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಬಾಬಾ ರಾಮದೇವ್ ರವರು ಪಾಲ್ಗೊಂಡು ಅಸಂಖ್ಯಾತ ಭಕ್ತರ ಉಪಸ್ಥಿತಿಯಲ್ಲಿ ಯೋಗಶಿಬಿರವನ್ನು ಮಾಡಿದರು .

Related posts

ಹೆತ್ತ ತಾಯಿಯನ್ನೇ ಕತ್ತು ಹಿಸುಕಿ ಕೊಂದ ಪಾಪಿ ಮಗ.ಅರೋಪಿ ಸಿಕ್ಕಿ ಬಿದ್ದಿದ್ದು ಹೇಗೆ ಗೊತ್ತಾ..?

Udupilive News

ಕೊರಗ ಬುಡಕಟ್ಟು ಸಮುದಾಯದವರಿಗೆ ಮೂಲಭೂತ ದಾಖಲಾತಿಗಳಿಗೆ ಸಂಬಂಧಿಸಿದ ತರಬೇತಿ

Udupilive News

ಕಟಪಾಡಿ – ಶಿರ್ವ ರಸ್ತೆ ದುರಸ್ತಿಗೆ 13 ಕೋ. ಪ್ರಸ್ತಾವನೆ ಸಲ್ಲಿಕೆ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ

Udupilive News

Leave a Comment