ಉಡುಪಿಕಾಪು

ಕಟಪಾಡಿ – ಶಿರ್ವ ರಸ್ತೆ ದುರಸ್ತಿಗೆ 13 ಕೋ. ಪ್ರಸ್ತಾವನೆ ಸಲ್ಲಿಕೆ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಕಾಪು, ಅ. 26 : ಮಳೆ ಮತ್ತು ಪ್ರಾಕೃತಿಕ ವಿಕೋಪದಿಂದಾಗಿ ತೀವ್ರ ಹಾನಿಗೀಡಾಗಿರುವ ಕಟಪಾಡಿ – ಶಿರ್ವ ರಾಜ್ಯ ಹೆದ್ದಾರಿಯ ಮರು ನಿರ್ಮಾಣಕ್ಕಾಗಿ 13 ಕೋಟಿ ರೂಪಾಯಿ ವೆಚ್ಚದ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ತಿಳಿಸಿದ್ದಾರೆ.

ಕೇಂದ್ರ ಸರಕಾರಕ್ಕೆ ಸಿಅರ್ ಎಫ್ ನಿಧಿಯ 6 ಕೋಟಿ ರೂಪಾಯಿ ಮತ್ತು ರಾಜ್ಯ ಸರಕಾರದ ಲೋಕೋಪಯೋಗಿ ಇಲಾಖೆಗೆ 7 ಕೋಟಿ ರೂಪಾಯಿ ವೆಚ್ಚದ ಪ್ರಸ್ತಾವನೆ‌ ಸಲ್ಲಿಸಲಾಗಿದೆ.

ಮಳೆಯ ಕಾರಣಕ್ಕೆ ತೀರಾ ಹದಗೆಟ್ಟು ಹೋಗಿದ್ದ ರಸ್ತೆಯನ್ನು ನಾಲ್ಕೈದು ಬಾರಿ ರಿಪೇರಿ ಮಾಡಿಸಲಾಗಿತ್ತು. ಕೇಂದ್ರ ಸರಕಾರದ ಸಿ.ಆರ್.ಎಫ್ (CRF) ನಿಧಿಯಿಂದ ದ 6 ಕೋಟಿ ಅನುದಾನ ಮಂಜೂರಾಗಿ ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ. ರಾಜ್ಯ ಸರ್ಕಾರದ ಲೋಕೋಪಯೋಗಿ ಇಲಾಖೆಯಿಂದ 7 ಕೋಟಿ ಅನುದಾನ ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಸಿದ್ದು ಅನುಮೋದನೆ ಬಾಕಿ ಇದೆ. ಕೂಡಲೇ ರಸ್ತೆ ಮರು ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ತಿಳಿಸಿದ್ದಾರೆ.

Related posts

ಜುಲೈ 4, 5 ಮತ್ತು 6 ರಂದು ಹಲಸು – ಮಾವು – ಕೃಷಿ – ಕೌಶಲ ಬೃಹತ್ ಮೇಳ

Udupilive News

ಸಾಮಾನ್ಯ ಕಾರ್ಯಕರ್ತನನ್ನು ಕಾಂಗ್ರೆಸ್ ಪಕ್ಷ ಗುರುತಿಸಿ ಟಿಕೆಟ್ ನೀಡಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Udupilive News

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಡೀನ್ ಆಗಿ ಡಾ. ಅನಿಲ್ ಕೆ. ಭಟ್ ನೇಮಕ

Udupilive News

Leave a Comment