ಉಡುಪಿಕಾಪು

ಕಟಪಾಡಿ – ಶಿರ್ವ ರಸ್ತೆ ದುರಸ್ತಿಗೆ 13 ಕೋ. ಪ್ರಸ್ತಾವನೆ ಸಲ್ಲಿಕೆ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಕಾಪು, ಅ. 26 : ಮಳೆ ಮತ್ತು ಪ್ರಾಕೃತಿಕ ವಿಕೋಪದಿಂದಾಗಿ ತೀವ್ರ ಹಾನಿಗೀಡಾಗಿರುವ ಕಟಪಾಡಿ – ಶಿರ್ವ ರಾಜ್ಯ ಹೆದ್ದಾರಿಯ ಮರು ನಿರ್ಮಾಣಕ್ಕಾಗಿ 13 ಕೋಟಿ ರೂಪಾಯಿ ವೆಚ್ಚದ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ತಿಳಿಸಿದ್ದಾರೆ.

ಕೇಂದ್ರ ಸರಕಾರಕ್ಕೆ ಸಿಅರ್ ಎಫ್ ನಿಧಿಯ 6 ಕೋಟಿ ರೂಪಾಯಿ ಮತ್ತು ರಾಜ್ಯ ಸರಕಾರದ ಲೋಕೋಪಯೋಗಿ ಇಲಾಖೆಗೆ 7 ಕೋಟಿ ರೂಪಾಯಿ ವೆಚ್ಚದ ಪ್ರಸ್ತಾವನೆ‌ ಸಲ್ಲಿಸಲಾಗಿದೆ.

ಮಳೆಯ ಕಾರಣಕ್ಕೆ ತೀರಾ ಹದಗೆಟ್ಟು ಹೋಗಿದ್ದ ರಸ್ತೆಯನ್ನು ನಾಲ್ಕೈದು ಬಾರಿ ರಿಪೇರಿ ಮಾಡಿಸಲಾಗಿತ್ತು. ಕೇಂದ್ರ ಸರಕಾರದ ಸಿ.ಆರ್.ಎಫ್ (CRF) ನಿಧಿಯಿಂದ ದ 6 ಕೋಟಿ ಅನುದಾನ ಮಂಜೂರಾಗಿ ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ. ರಾಜ್ಯ ಸರ್ಕಾರದ ಲೋಕೋಪಯೋಗಿ ಇಲಾಖೆಯಿಂದ 7 ಕೋಟಿ ಅನುದಾನ ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಸಿದ್ದು ಅನುಮೋದನೆ ಬಾಕಿ ಇದೆ. ಕೂಡಲೇ ರಸ್ತೆ ಮರು ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ತಿಳಿಸಿದ್ದಾರೆ.

Related posts

ಚಕ್ರವರ್ತಿ ಸೂಲಿಬೆಲೆಯವರು ಸುಳ್ಳನ ಚಕ್ರವರ್ತಿ.ಉಡುಪಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ

Udupilive News

ಸೆಪ್ಟಂಬರ್ 14 ರಂದು ಕೇರಳ ಸಮಾಜಂ (ರಿ)ಉಡುಪಿವತಿಯಿಂದ ಒಣಂ ಸಂಭ್ರಮಾಚರಣೆ

Udupilive News

ಪೇಜಾವರ ಶ್ರೀಗಳ ಬಗ್ಗೆ ಅವಹೇಳಕಾರಿ ಹೇಳಿಕೆ; ಬಿ.ಕೆ. ಹರಿಪ್ರಸಾದ್ ವಿರುದ್ಧ ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾ ಖಂಡನೆ

Udupilive News

Leave a Comment