ಉಡುಪಿ

ಪೇಜಾವರ ಶ್ರೀಗಳ ಬಗ್ಗೆ ಲಘುವಾಗಿ ಮಾತನಾಡಿದ್ದು ಹಿಂದೂ ಸಮಾಜಕ್ಕೆ ನೋವು ತಂದಿದೆ; ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಪೇಜಾವರ ಶ್ರೀಗಳ ಬಗ್ಗೆ ಬಿಕೆ ಹರಿಪ್ರಸಾದ್ ಲಘುವಾಗಿ ಮಾತನಾಡಿದ್ದು, ಹಿಂದೂ ಸಮಾಜಕ್ಕೆ ನೋವು ತಂದಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಪೇಜಾವರ ಶ್ರೀಗಳ ಕುರಿತು ಅವಹೇಳಕಾರಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಉಡುಪಿಯಲ್ಲಿ ಇಂದು ಪ್ರತಿಕ್ರಿಯಿಸಿದ ಅವರು, ಹರಿಪ್ರಸಾದ್ ಸರ್ವ ಶ್ರೇಷ್ಠ ಸಂತನ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ. ಇದರಿಂದ ಯಾವುದೇ ಒಂದು ಜಾತಿ ವರ್ಗಕ್ಕೆ ಅಲ್ಲ, ಇಡೀ ಹಿಂದೂ ಸಮುದಾಯಕ್ಕೆ ನೋವಾಗಿದೆ. ಹರಿಪ್ರಸಾದ್ ಸ್ವಲ್ಪ ಗಡಿಬಿಡಿ ಮನುಷ್ಯ. ಗಡಿಬಿಡಿಯಲ್ಲಿ ಮಾತನಾಡಿದರೆ ತಕ್ಷಣ ಪೇಜಾವರ ಶ್ರೀಗಳ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

ಪೇಜಾವರ ಹಿರಿಯ ವಿಶ್ವೇಶತೀರ್ಥರು ಪ್ರಥಮ ಬಾರಿಗೆ ಪರಿಶಿಷ್ಟರ ಕೇರಿಗಳಿಗೆ ಭೇಟಿ ಕೊಟ್ಟವರು. ಅಸ್ಪೃಶ್ಯತೆ ನಿವಾರಣೆಗೆ ಶ್ರಮಿಸಿದವರು, ಜನಾಂದೋಲನ ಮಾಡಿದವರು. ವಿಶ್ವಪ್ರಸನ್ನರಿಗೆ ರಾಷ್ಟ್ರಮಟ್ಟದಲ್ಲಿ ಗೌರವ ಇದೆ. ರಾಮಮಂದಿರ ಉದ್ಘಾಟನೆ ವೇಳೆ ಕೇಂದ್ರ ಸರ್ಕಾರ ಬಹಳ ಗೌರವದಿಂದ ನಡೆಸಿಕೊಂಡಿದೆ. ಅವರ ಬಗ್ಗೆ ಲಘವಾಗಿ ಮಾತನಾಡಿದ್ದು ಸರಿಯಲ್ಲ. ಇಡೀ ರಾಷ್ಟ್ರ ಹರಿಪ್ರಸಾದ್ ಮಾತಿನಿಂದ ನೋವುಪಟ್ಟಿದೆ. ಹೀಗಾಗಿ ತಕ್ಷಣವೇ ಹರಿಪ್ರಸಾದ್ ಶ್ರೀಗಳ ಕ್ಷಮೆಯಾಚಿಸಬೇಕು ಎಂದು ಹೇಳಿದರು.

Related posts

ಬನ್ನಂಜೆಯಲ್ಲಿ ಹೆದ್ದಾರಿ ಡಿವೈಡರ್ ಒಡೆದು ಹಾಕಿದ ಪ್ರಕರಣ ,ಬಿಜೆಪಿ ಭ್ರಷ್ಚಚಾರಕ್ಕೆ ಹಿಡಿದ ಕೈ ಕನ್ನಡಿ : ಬನ್ನಂಜೆ ಸುರೇಶ್ ಶೆಟ್ಟಿ ಆಕ್ರೋಶ

Udupilive News

ಮರವಂತೆ ಪ್ರಕಶ್ ಪಡಿಯಾರ್‌ ನಿಧನ‌.ಯಕ್ಷಗಾನ ಕಲಾರಂಗ ಸಂತಾಪ.

Udupilive News

ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು ಎಲ್ಲರೂ ಕೈಜೋಡಿಸಬೇಕು :ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

Udupilive News

Leave a Comment