ಉಡುಪಿಬೈಂದೂರು

ಮನೆಯಂಗಳದಲ್ಲಿ ಮಲಗಿದ್ದ ನಾಯಿಯನ್ನು ಹೊತ್ತೊಯ್ದ ಚಿರತೆ.

ಉಡುಪಿ: ಚಿರತೆಯೊಂದು ಮನೆಯಂಗಳದಲ್ಲಿ ಮಲಗಿದ್ದ ನಾಯಿಯ ಮೇಲೆ ದಾಳಿ ನಡೆಸಿ ಬಳಿಕ ಹೊತ್ತೊಯ್ದ ಘಟನೆ ಬೈಂದೂರು ತಾಲೂಕಿನ ಕಟ್ ಬೆಲ್ತೂರು ಗ್ರಾಪಂ ವ್ಯಾಪ್ತಿಯ ದೇವಳಕುಂದ ಎಂಬಲ್ಲಿ ನಡೆದಿದೆ.

ಚಿರತೆ ನಾಯಿಯನ್ನು ಹೊತ್ತೊಯ್ಯುವ ಭಯಾನಕ ದೃಶ್ಯ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ದೇವಳಕುಂದ ಗ್ರಾಮದ ಜಾಡಿಕಾಸ್ರ್ ನ ಸುಧೀರ್ ಶೆಟ್ಟಿ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದೆ. ಹೊಂಚು ಹಾಕಿಕೊಂಡು ಬರುವ ಚಿರತೆ ಅಂಗಳದಲ್ಲಿ ಮಲಗಿದ್ದ ನಾಯಿಯ ಮೇಲೆ ಏಕಾಏಕಿಯಾಗಿ ದಾಳಿ ನಡೆಸಿದೆ ಗಾಢ ನಿದ್ದೆಯಲ್ಲಿದ್ದ ನಾಯಿಗೆ ಚಿರತೆಯ ಬಾಯಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಿಲ್ಲ. ಕ್ಷಣಾರ್ಧದಲ್ಲಿ ಚಿರತೆ ನಾಯಿಯನ್ನು ಹೊತ್ತುಕೊಂಡು ಕಾಡಿನೊಳಗೆ ಓಡಿ ಹೋಗಿದೆ.

ಚಿರತೆ ಕಾಣಿಸಿಕೊಂಡಿದ್ದರಿಂದ ಗ್ರಾಮಸ್ಥರಿಗೆ ಆತಂಕ ಶುರುವಾಗಿದೆ. ಬೋನಿಟ್ಟು ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ.

Related posts

ಶಕ್ತಿ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ ಇಡೀ ದೇಶಕ್ಕೆ ಪಂಚ ಗ್ಯಾರಂಟಿ ಯೋಜನೆಗಳು ಮಾದರಿ ಉಡುಪಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟನೆ

Udupilive News

ಕಾಪು ಜಿಲ್ಲೆಯಲ್ಲಿ ಧಾರಾಕಾರ ಮಳೆ – ಉದ್ಯಾವರದಲ್ಲಿ ತೋಡಿಗೆ ಬಿದ್ದು ವ್ಯಕ್ತಿ ಸಾವು

Udupilive News

ನನ್ನಿಂದ ಸಾಧ್ಯವಾದಷ್ಟು ಕೆಲಸಗಳನ್ನು ಜನರಿಗೆ ಮಾಡಿಕೊಟ್ಟಿದ್ದೇನೆ.ಕೆ ವಿದ್ಯಾಕುಮಾರಿ.

Udupilive News

Leave a Comment