ಉಡುಪಿ

ಇಂದ್ರಾಳಿ ಸೇತುವೆ ಕಾಮಗಾರಿ ವೇಳೆ. ತಲೆಕೆಳಗಾಗಿ ಬಿದ್ದ ಕ್ರೇನ್.

ಉಡುಪಿ: ನಾಲ್ಕಾರು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಇಂದ್ರಾಳಿ ರೈಲ್ವೆ ಬ್ರಿಡ್ಜ್ ಕಾಮಗಾರಿ ಗೊಂದಲದ ಗೂಡಾಗಿದೆ. ಇಲ್ಲಿನ ಏಕಮುಖ ಸಂಚಾರದಿಂದ ಜನರು ರೋಸಿ ಹೋಗಿದ್ದಾರೆ. ಸಾಕಷ್ಟು ಹೋರಾಟಗಳ ಬಳಿಕ ಇದೀಗ ಸೇತುವೆ ಕಾಮಗಾರಿ ಆಮೆ ಗತಿಯಲ್ಲಿ ಶುರುವಾಗಿದೆ. ಕಾಮಗಾರಿ ನಡೆಯುತ್ತಿರುವ ವೇಳೆ ಕ್ರೈನ್ ವೊಂದು ತಲೆಕೆಳಗಾಗಿ ಬಿದ್ದ ಘಟನೆ ನಡೆದಿದೆ.

ಎಡಮಗ್ಗಲಿನ ಎತ್ತರದ ರಸ್ತೆಯಿಂದ ಬಲ ಮಗ್ಗುಲಿನಲ್ಲಿರುವ ತಗ್ಗು ರಸ್ತೆಗೆ, ಈ ಕ್ರೈನ್ ಬಿದ್ದಿದ್ದರೆ ಭಾರಿ ಅಪಾಯ ಸಂಭವಿಸುತ್ತಿತ್ತು. ಹತ್ತಾರು ವಾಹನಗಳು ಸಂಚರಿಸುವ ರಸ್ತೆಯ ಪಕ್ಕದಲ್ಲಿ ಕಂಡು ಬಂದ ಅಪಾಯಕಾರಿ ಸನ್ನಿವೇಶ ಜನರನ್ನು ಬೆಚ್ಚಿ ಬೀಳಿಸಿದೆ.

ತಲೆ ಕೆಳಗಾಗಿ ಬಿದ್ದ ಕ್ರೈನನ್ನು ಇದೀಗ ಬೃಹತ್ ಗಾತ್ರದ ಮತ್ತೊಂದು ಕ್ರೈನ್ ಮೂಲಕ ಎತ್ತಲಾಗಿದೆ. ಪ್ರತಿ ಬಾರಿ ಒಂದಿಲ್ಲೊಂದು ಅಪಾಯವನ್ನು ಆಹ್ವಾನಿಸುವ ಈ ಪ್ರದೇಶ ಕಾಮಗಾರಿ ಪೂರ್ಣಗೊಂಡು ಆದಷ್ಟು ಬೇಗ ಸಾರ್ವಜನಿಕರ ಬಳಕೆಗೆ ಲಭ್ಯವಾಗಲಿ ಎಂದು ಜನರು ಒತ್ತಾಯಿಸಿದ್ದಾರೆ.

Related posts

ಯುವ ಜನರು ಸ್ವಯಂ ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು: ವಾರ್ತಾಧಿಕಾರಿ ಮಂಜುನಾಥ್ ಬಿ

Udupilive News

ಉಡುಪಿ ಜಾಮಿಯ ಮಸೀದಿಗೆ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಸೌಹಾರ್ದ ಭೇಟಿ

Udupilive News

ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಕನ್ನಡ ಭಾಷೆ ಗೊತ್ತಿರುವ ಅಧಿಕಾರಿಗಳನ್ನು ನೇಮಿಸಿ: ಬ್ಯಾಂಕ್ಗಳಿಗೆ ಕೋಟ ಸಲಹೆ

Udupilive News

Leave a Comment