ರಾಜ್ಯ

ಮುರುಡೇಶ್ವರ | ಸಮುದ್ರದಲ್ಲಿ ಆಟವಾಡುತ್ತಿದ್ದ 7 ವಿದ್ಯಾರ್ಥಿನಿಯರು ನೀರುಪಾಲು; ಮೂವರ ರಕ್ಷಣೆ

ಕಾರವಾರ: ಸಮುದ್ರದಲ್ಲಿ ಆಟವಾಡುತಿದ್ದ 7 ಜನ ವಿದ್ಯಾರ್ಥಿನಿಯರು ಅಲೆಗಳ ಹೊಡೆತಕ್ಕೆ ನೀರುಪಾಲಾಗಿದ್ದು, ಓರ್ವ ವಿದ್ಯಾರ್ಥಿನಿ ಸಾವು ಕಂಡರೇ ಮೂವರು ಕಾಣೆಯಾಗಿದ್ದು, ಮೂರು ಜನ ವಿದ್ಯಾರ್ಥಿನಿಯರನ್ನು ಲೈಫ್ ಗಾರ್ಡ್‌ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಟಳ ತಾಲೂಕಿನ ಮುರುಡೇಶ್ವರ ಕಡಲ ತೀರದಲ್ಲಿ ನಡೆದಿದೆ.

ಕೋಲಾರ ಜಿಲ್ಲೆಯ ಮುಳಬಾಗಿಲಿನಿಂದ ಮುರುಡೇಶ್ವರಕ್ಕೆ ಪ್ರವಾಸಕ್ಕೆ ಬಂದಿದ್ದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 54 ವಿದ್ಯಾರ್ಥಿನಿಯರು ಬುಧವಾರ ಸಂಜೆ ಕಡಲಿನಲ್ಲಿ ಆಟವಾಡಲು ಇಳಿದಿದ್ದರು. ಈ ವೇಳೆ ಅಲೆಗಳ ಹೊಡೆತಕ್ಕೆ ಏಳು ವಿದ್ಯಾರ್ಥಿನಿಯರು ನೀರುಪಾಲಾಗಿದ್ದರು.

ಈ ಸಂದರ್ಭದಲ್ಲಿ ಲೈಫ್‌ಗಾರ್ಡಗಳು ಯಾವುದೇ ಪರಿಕರ ಸಾಧನ ಇಲ್ಲದಿದ್ದರೂ ಮೂರು ಜನ ವಿದ್ಯಾರ್ಥಿನಿಯರನ್ನು ರಕ್ಷಣೆ ಮಾಡಿದ್ದು ಓರ್ವ ವಿದ್ಯಾರ್ಥಿನಿ ಸಾವು ಕಂಡರೇ ಇನ್ನೂ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಮುಳಬಾಗಿಲಿನ ಕೊತ್ತೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಶಾವಂತಿ (15) ಸಾವು ಕಂಡ ವಿದ್ಯಾರ್ಥಿನಿಯಾಗಿದ್ದು ಮುಳಬಾಗಿಲಿನ ಯಶೋಧ, ವೀಕ್ಷಣಾ , ಲಿಪಿಕಾ ರಕ್ಷಣೆಗೊಳಗಾದವರಾಗಿದ್ದು ಇವರಲ್ಲಿ ಓರ್ವಳ ಸ್ಥಿತಿ ಗಂಭೀರವಾಗಿದ್ದು ಮೂವರಿಗೂ ಭಟ್ಕಳ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Related posts

ಅ.15 ರಿಂದ ಮುಜರಾಯಿ ಇಲಾಖೆ ವ್ಯಾಪ್ತಿಯ ಎಲ್ಲಾ ದೇವಾಲಯಗಳು ಪ್ಲಾಸ್ಟಿಕ್ ಮುಕ್ತ..!

Udupilive News

ಗೌರಿ ಲಂಕೇಶ್ ಹತ್ಯೆಯ ಆರೋಪಿಗಳಿಗೆ ಸನ್ಮಾನ ಪ್ರಕರಣ :ಪ್ರತಿಗಾಮಿ ಶಕ್ತಿಗಳು ರಾಷ್ಟ್ರ ಭಕ್ತಿಯ ಹೆಸರಿನಲ್ಲಿ ರಾಷ್ಟ್ರದ್ರೋಹದ ಕೆಲಸ ಮಾಡುತ್ತಿವೆ – ಇದ್ರೀಸ್ ಹೂಡೆ

Udupilive News

ಅ.9ರಂದು ಉಡುಪಿಯ ಗೀತಾಂಜಲಿ ಸಿಲ್ಕ್ಸ್’ನಲ್ಲಿ ನವೀಕೃತ ಪುರುಷರ ವಿಭಾಗದ ಉದ್ಘಾಟನೆ ಸ್ವದೇಶಿ-ವಿದೇಶಿಯ ಎಲ್ಲ ಪ್ರಮುಖ ಬ್ರಾಂಡ್ ಗಳು ಲಭ್ಯ

Udupilive News

Leave a Comment