ಉಡುಪಿಕಾಪುಕಾರ್ಕಳ

ಕಾರು ಮತ್ತು ಟಿಪ್ಪರ್ ಮದ್ಯೆ ಭೀಕರ ಅಫಘಾತ.ಟಿಪ್ಪರ್ ಅಡಿಗೆ ಬಿದ್ದು ಚಾಲಕ ಸಾವು

ಶಂಕರಪುರ: ಕಾರ್ ಮತ್ತು ಟಿಪ್ಪರ್ ಮದ್ಯೆ ಅಫಘಾತ ನಡೆದು ಟಿಪ್ಪರ್ ಚಾಲಕ ತನ್ನದೇ ಟಿಪ್ಪರ್ ಅಡಿಗೆ ಬಿದ್ದು ಮೃತನಾದ ಘಟನೆ ಮಂಗಳವಾರ ಸಂಜೆ ನಡೆದಿದೆ.

ಕಾಪು ತಾಲೂಕಿನ ಶಂಕರಪುರ ದುರ್ಗಾ ನಗರ ಎಂಬಲ್ಲಿ ನಡೆದ ಘಟನೆ ನಡೆದಿದೆ. ಶಿರ್ವ ದಿಂದ ಕಟಪಾಡಿ ಕಡೆಗೆ ಅತೀ ವೇಗದಿಂದ ಬರುತ್ತಿದ್ದ ಟಿಪ್ಪರ್ ಎದುರಿನಿಂದ ಬಂದ ಕಾರ್ ಗೆ ಢಿಕ್ಕಿ ಹೊಡೆದಿದೆ.ಢಿಕ್ಕಿ ಯ ರಭಸಕ್ಕೆ ಟಿಪ್ಪರ್ ಮಗುಚಿ‌ಬಿದ್ದಿದೆ.ಮಗುಚಿ ಬೀಳುವ ಸಂಧರ್ಭ ಚಾಲಕ
ಟಿಪ್ಪರ್ ನಿಂದ‌ ಹೊರಗೆ ಹಾರಿ ಪ್ರಾಣ ಉಳಿಸಿಕೊಳ್ಳಲು ಪ್ರಯತ್ನಿಸಿದ್ದು ದುರಾದೃಷ್ಟವಶಾತ್ ಚಾಲಕ ಕೊಕ್ಕರ್ಣೆ ನಿವಾಸಿ ಕೃಷ್ಣ ನಾಯಕ್ (55) ಟಿಪ್ಪರ್ ನ ಅಡಿಗೆ ಬಿದ್ದು ಮೃತನಾಗಿದ್ದಾನೆ.

ಅಫಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಕಾರಿನಲ್ಲಿ ದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.ಸ್ಥಳಕ್ಕೆ ಅಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಶ್ರೀ ಕೃಷ್ಣ ಮಠದಲ್ಲಿ ಪಶ್ಚಿಮ ಜಾಗರ ಪೂಜೆಯಲ್ಲಿ ಭಾಗವಹಿಸಿದ ಬಾಬಾ ರಾಮದೇವ್ ಜೀ.

Udupilive News

ಉಡುಪಿಯಲ್ಲಿ ಲವ್ ಜಿಹಾದ್? ಇಸ್ಲಾಂಗೆ ಕನ್ವರ್ಟ್ ಆಗುವಂತೆ ವಿದ್ಯಾರ್ಥಿನಿಗೆ ಕಿರುಕುಳ ಆರೋಪ : ವೈದ್ಯ ಅರೆಸ್ಟ್!

Udupilive News

ಇತಿಹಾಸ ಪ್ರಸಿದ್ಧ ಬೈಲೂರು ಮಹಿಷಮರ್ದಿನಿ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥವಾಗಿ ಡಿ.9ರಿಂದ 15ರ ವರೆಗೆ ಶತಚಂಡಿಕಾ ಯಾಗ ಮತ್ತು ಬ್ರಹ್ಮಮಂಡಲ ಸೇವೆ .

Udupilive News

Leave a Comment