ಉಡುಪಿಕುಂದಾಪುರಬ್ರಹ್ಮಾವರ

20,000 ಲಂಚ: ಬ್ರಹ್ಮಾವರ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಲೋಕಾಯುಕ್ತ ಬಲೆಗೆ.

ಬ್ರಹ್ಮಾವರ: ಬ್ರಹ್ಮಾವರದ ಮೆಸ್ಕಾಂ ಕಚೇರಿ ಮೇಲೆ

ಶುಕ್ರವಾರ ಲೋಕಾಯುಕ್ತ ದಾಳಿ ನಡೆದಿದೆ. ದಾಳಿಯಲ್ಲಿ ಬ್ರಹ್ಮಾವರ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯ‌ರ್ ಅಶೋಕ್ ಪೂಜಾರಿ ಲಂಚ ಸ್ವೀಕರಿಸುತ್ತಿರುವಾಗಲೇ ಸಿಕ್ಕಿಬಿದ್ದಿದ್ದಾರೆ.

ಸಾರ್ವಜನಿಕರ ದೂರಿನ ಮೇರೆಗೆ ದಾಳಿ ನಡೆಸಿ, ಇಪ್ಪತ್ತು ಸಾವಿರ ಲಂಚ ಸ್ವೀಕರಿಸುತ್ತಿದ್ದಾಗ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅಶೋಕ್ ಪೂಜಾರಿ ಅವರನ್ನು ವಶಕ್ಕೆ ಪಡೆಯಲಾಗಿದೆ.

ಈ ಹಿಂದೆ ಕುಂದಾಪುರದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸಿದ್ದ ಅಶೋಕ್ ಪೂಜಾರಿ, ಕಳೆದ 3-4 ವರ್ಷಗಳಿಂದ ಬ್ರಹ್ಮಾವರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Related posts

ನಗರದ ಚಿನ್ನದ ಅಂಗಡಿಯಲ್ಲಿ ಕಳ್ಳತನ.ಅಪಾರ ಮೌಲ್ಯದ ಸೊತ್ತುಗಳು ಕಳವು

Udupilive News

ಉಡುಪಿ ಪತ್ರಕರ್ತರ ‘ರಜತ ಕ್ರೀಡಾ ಸಂಭ್ರಮ’ದ ಜೆರ್ಸಿ ಅನಾವರಣ

Udupilive News

ಮಾಬುಕಳ| ಅಪರಿಚಿತ ವಾಹನ ಡಿಕ್ಕಿ – ಪಾದಚಾರಿ ಸ್ಥಳದಲ್ಲೇ ಸಾವು!

Udupilive News

Leave a Comment