ಉಡುಪಿ

ಅಹಮದಾಬಾದ್ ವಿಮಾನ ದುರಂತ ಅತ್ಯಂತ ಬೇಸರದ ಸಂಗತಿ : ರಮೇಶ್ ಕಾಂಚನ್

ಉಡುಪಿ: ಗುಜರಾತ್ ನ ಅಹಮದಾಬಾದಿನಿಂದ ಲಂಡನ್ನಿಗೆ ಹೊರಟ್ಟಿದ ವಿಮಾನ ಪತನಗೊಂಡು 241 ಪ್ರಯಾಣಿಕರು ಹಾಗೂ ದುರಂತಕ್ಕೀಡಾದ ವಿಮಾನ ಮೇಘಾನಿ ನಗರದ ವೈದ್ಯಕೀಯ ಕಾಲೇಜಿನ ವಸತಿ ನಿಲಯಕ್ಕೆ ಬಡಿದಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ಮೃತಪಟ್ಟಿರುವುದು ಅತ್ಯಂತ ನೋವಿನ ವಿಚಾರವಾಗಿದೆ.ಈ ದುರ್ಘಟನೆಯಲ್ಲಿ ಮೃತ ಪಟ್ಟವರ ಆತ್ಮಕ್ಕೆ ಶಾಂತಿ ಸಿಗಲಿ.ಅವರ ಕುಟುಂಬ ವರ್ಗಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪರವಾಗಿ ಪ್ರಾರ್ಥಿಸುವುದಾಗಿ ಅಧ್ಯಕ್ಷ ರಮೇಶ್ ಕಾಂಚನ್ ಹೇಳಿದರು‌.
ವಿಮಾನ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಪತನಗೊಂಡಿರುವ ಬಗ್ಗೆ ಉನ್ನತ ಮಟ್ಟದಲ್ಲಿ ಸಮಗ್ರ ತನಿಖೆಯಾಗಲಿ.
ಮುಂದೆ ಇಂತಹ ಅವಘಡಗಳು
ಸಂಭವಿಸಿದಂತೆ ಕೇಂದ್ರ ಸರ್ಕಾರ ವಿಮಾನ ಯಾನ ಸುರಕ್ಷತೆಯ ಬಗ್ಗೆ ಸಮರ್ಪಕ ಕ್ರಮ ಕೈಗೊಳ್ಳುವುದರೊಂದಿಗೆ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ರಮೇಶ್ ಕಾಂಚನ್ ಆಗ್ರಹಿಸಿದರು.

Related posts

ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು ಎಲ್ಲರೂ ಕೈಜೋಡಿಸಬೇಕು :ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

Udupilive News

ಕೆಲಸವಿಲ್ಲದೇ ಕಂಗಲಾಗಬೇಡಿ ,ಕೈ ತುಂಬಾ ಸಂಬಳ ಕೊಡುವ ಕೆಲಸಗಳು ಇಲ್ಲಿದೆ.

Udupilive News

ಇಂದ್ರಾಳಿ ರೈಲ್ವೆ ಬ್ರಿಡ್ಜ್ ಕಾಮಗಾರಿ ವಿಳಂಬ ಖಂಡಿಸಿ ಸೇತುವೆ ಹೋರಾಟ ಸಮಿತಿಯಿಂದ ಪ್ರತಿಭಟನೆ

Udupilive News

Leave a Comment