ಉಡುಪಿ

ಎಡನೀರು ಮಠಾಧೀಶರಿಂದ ಶ್ರೀಕೃಷ್ಣ ದರ್ಶನ

ಉಡುಪಿ:ಪರ್ಯಾಯ ಮಠಾಧೀಶರಾದ ಪೂಜ್ಯ ಪುತ್ತಿಗೆ ಶ್ರೀಪಾದರ ಆಮಂತ್ರಣದಂತೆ ಎಡನೀರು ಮಠಾಧೀಶರಾದ ಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿಯವರು ಇಂದು ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀ ಕೃಷ್ಣ ದರ್ಶನ ಪಡೆದರು.

ಶ್ರೀಪಾದರನ್ನು ಆತ್ಮೀಯವಾಗಿ ಬರಮಾಡಿಕೊಂಡ ಪರ್ಯಾಯ ಶ್ರೀಪಾದರು ಹಿಂದೂ ಸಮಾಜದ ರಕ್ಷ್ಮಣೆಯಲ್ಲಿ ಎಡನೀರು ಮಠದ ಕೊಡುಗೆಯನ್ನು ನೆನಪಿಸುತ್ತಾ ಹಿಂದಿನಿಂದಲೂ ಅಷ್ಟ ಮಠದ ಜೊತೆಗಿರುವ ಮಧುರ ಬಾಂಧವ್ಯವನ್ನು ಸ್ಮರಿಸಿಕೊಂಡು ಹೀಗೆಯೇ ಮುಂದುವರಿಯಲಿ ಎಂದು ಕಿರಿಯ ಶ್ರೀಪಾದರ ಜೊತೆಗೂಡಿ ಆಶಿಸಿದರು.

ಶ್ರೀ ಮಠದಿಂದ ಸಾಂಪ್ರದಾಯಿಕ ಗೌರವವನ್ನು ಅರ್ಪಿಸಲಾಯಿತು.

ಪರ್ಯಾಯ ಶ್ರೀಪಾದರೊಡನೆ ಗೀತಮಂದಿರ ದರ್ಶನವನ್ನು ಪಡೆದು ಶ್ರೀಗಳ ಕೋಟಿ ಗೀತಾ ಲೇಖನ ಯಜ್ಞದ ಬೃಹತ್ ಅಭಿಯಾನದ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.

Related posts

ಕುಂದಾಪುರ: ಸಮುದ್ರದಲ್ಲಿ ಈಜಲು ತೆರಳಿದ ಇಬ್ಬರು ಸಮುದ್ರಪಾಲು

Udupilive News

ಬೈಂದೂರು: ಸ್ಕೂಟಿಗೆ ಮಣ್ಣು ತುಂಬಿದ ಲಾರಿ ಡಿಕ್ಕಿ ಹೊಡೆದು ಪಲ್ಟಿ- ಮಣ್ಣಿನಡಿಯಲ್ಲಿ ಸಿಲುಕಿದ ಮಹಿಳೆಯ ರಕ್ಷಣೆ

Udupilive News

ವಿಧಾನ ಪರಿಷತ್ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಗೆ ಜಯ

Udupilive News

Leave a Comment