ಉಡುಪಿಕಾಪು

ಕಾಪು ಜಿಲ್ಲೆಯಲ್ಲಿ ಧಾರಾಕಾರ ಮಳೆ – ಉದ್ಯಾವರದಲ್ಲಿ ತೋಡಿಗೆ ಬಿದ್ದು ವ್ಯಕ್ತಿ ಸಾವು

ಕಾಪು: ಜಿಲ್ಲೆಯಲ್ಲಿಂದು ಭಾರೀ ಮಳೆಯಾಗುತ್ತಿದ್ದು ರೆಡ್ ಅಲರ್ಟ್ ಘೋಷಣೆಯಾಗಿದೆ.ಭಾನುವಾರ ಸುರಿದ ಭಾರೀ ಮಳೆಗೆ ಉದ್ಯಾವರ ಕೇದಾ‌ರ್ ನಿವಾಸಿ ರೊನಾಲ್ಡ್ ಫೆರ್ನಾಂಡಿಸ್ (52) ಎಂಬವರು ತೋಡಿಗೆ ಬಿದ್ದು ಮೃತಪಟ್ಟ ಘಟನೆ ಸಂಭವಿಸಿದೆ.

ರವಿವಾರ ಸಂಜೆ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದಾಗ ಮನೆ ಹಿಂಬದಿಯ ತೋಡಿಗೆ ಆಕಸ್ಮಿಕ ವಾಗಿ ಕಾಲು ಜಾರಿ ಬಿದ್ದು ಮೃತ ಪಟ್ಟಿರಬೇಕೆಂದು ಸಂಶಯಿ ಸಲಾಗಿದೆ. ಅವಿವಾಹಿತರಾಗಿದ್ದ ಅವರು ತಾಯಿ ಮತ್ತು ಸಹೋದರ ರನ್ನು ಅಗಲಿದ್ದಾರೆ. ಕಾಪು ಠಾಣೆ ಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ರೈಲು ಮಾರ್ಗ ಕುಸಿತ ಹಿನ್ನಲೆ ರೈಲು ಸಂಚಾರದಲ್ಲಿ ಬದಲಾವಣೆ.

Udupilive News

ಉಡುಪಿ: ಪಾರ್ಟಿ ಮಾಡುತ್ತಿದ್ದ ವೇಳೆ ಸಿಲಿಂಡರ್ ಸ್ಫೋಟ; ಗೋಡೆಗಳು ಛಿದ್ರ ಛಿದ್ರ

Udupilive News

ಪೆರಂಪಳ್ಳಿ: ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ; 1.87 ಲಕ್ಷ ಮೌಲ್ಯದ ಗಾಂಜಾ ವಶ

Udupilive News

Leave a Comment