ಉಡುಪಿ

ವಿದ್ಯಾರ್ಥಿವೇತನ ಸಮಸ್ಯೆ ಬಗೆಹರಿಸುವಂತೆ ಎಸ್ ಐ ಓ ವಿದ್ಯಾರ್ಥಿ ಸಂಘಟನೆಯಿಂದ ಉಡುಪಿ ಡಿಸಿಗೆ ಮನವಿ

ಇಡುಪಿ: ಎಸ್‌ ಐ ಓ ವಿದ್ಯಾರ್ಥಿ ಸಂಘಟನೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿಕೆ ಯವರನ್ನು ಭೇಟಿಯಾಗಿ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳ ವಿದ್ಯಾರ್ಥಿವೇತನ ರದ್ದುಪಡಿಸಿರುವ ಗಂಭೀರ ವಿಷಯವನ್ನು ಮನದಟ್ಟು ಮಾಡಲಾಯಿತು. ಈ ಹಿಂದೆ ರಾಷ್ಟ್ರೀಯ ವಿದ್ಯಾರ್ಥಿವೇತನ ಪೋರ್ಟಲ್‌ (NSP) ಮೂಲಕ ಲಭ್ಯವಿದ್ದ ಈ ವೇತನವನ್ನು ಇದೀಗ ರದ್ದುಪಡಿಸಲಾಗಿದ್ದು, ಪ್ರಸ್ತುತ ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್‌ (SSP) ಕೇವಲ 8ನೇ ತರಗತಿವರೆಗೆ ಮಾತ್ರ ಸಹಾಯಧನ ನೀಡುತ್ತಿದೆ. ಇದರ ಪರಿಣಾಮವಾಗಿ ಅನೇಕ ವಿದ್ಯಾರ್ಥಿಗಳು ಶಾಲೆ ಬಿಡುವಂತಹ ದುರಂತಕರ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ.

ಆದರಿಂದ ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್( SSP ) ನ್ನು 9 ನೇ ಮತ್ತು 10 ನೇ ತರಗತಿಯವರೆಗೆ ವಿಸ್ತರಿಸುವಂತೆ ಹಾಗೂ ಈ ಸಮಸ್ಯೆಯನ್ನು ತಕ್ಷಣದ ಮಟ್ಟಿಗೆ ಗಮನಿಸಿ ಮುಖ್ಯಮಂತ್ರಿಗಳ ಕಚೇರಿಗೆ ಮನವಿಯನ್ನು ಕಳುಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು.

ಈ ಸಂಧರ್ಭದಲ್ಲಿ ಎಸ್ ಐ ಓ ಉಡುಪಿಯ ಜಿಲ್ಲಾ ಕಾರ್ಯದರ್ಶಿಗಳಾದ ಸಮೀರ್ ತೀರ್ಥಹಳ್ಳಿ , ಸಫಾನ್ , ಅದ್ನಾನ್ , ನಿಹಾಲ್ , ನಿಫಾಲ್ ಮತ್ತು ಸದಸ್ಯರಾದ ಅಯಾನ್ ಮಲ್ಪೆ ,ಅಸೀಮ್ , ರಿಯಾನ್ ನಕ್ವಾ ಉಪಸ್ಥಿತರಿದ್ದರು.

ಎಸ್‌ ಐ ಓ ಉಡುಪಿ ಜಿಲ್ಲೆ

Related posts

ಇತಿಹಾಸ ಪ್ರಸಿದ್ಧ ಬೈಲೂರು ಮಹಿಷಮರ್ದಿನಿ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥವಾಗಿ ಡಿ.9ರಿಂದ 15ರ ವರೆಗೆ ಶತಚಂಡಿಕಾ ಯಾಗ ಮತ್ತು ಬ್ರಹ್ಮಮಂಡಲ ಸೇವೆ .

Udupilive News

ಶಂಕರಪುರದ ಅನಿಲ್ ಕುಮಾರ್ ರವರಿಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Udupilive News

ಅಂಗವಿಕಲರ ಕಲ್ಯಾಣಕ್ಕಾಗಿ ಜೀವನವನ್ನೇ ಮೂಡಿಪಾಗಿಟ್ಟಿರುವ ಜಗದೀಶ್ ಭಟ್ ಬಗ್ಗೆ ನಿಮಗೆಷ್ಟು ಗೊತ್ತು..?

Udupilive News

Leave a Comment