ಉಡುಪಿದಕ್ಷಿಣ ಕನ್ನಡ

ಪ್ರಚೋದನಕಾರಿ ಹೇಳಿಕೆ ಶರಣ್ ಪಂಪ್ ವೆಲ್ ವಿರುದ್ದ ಕೇಸ್.

ಬ್ರಹ್ಮಾವರದ ಕುಂಜಾಲುವಿನಲ್ಲಿ ನಡೆದ ಗೋ ಹತ್ಯೆಯ ಬಗ್ಗೆ ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿ ಧರ್ಮಗಳ ನಡುವೆ ದ್ವೇಷ ಹುಟ್ಟು ಹಾಕುವಂತಹ ಪ್ರಚೋದನಾಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ವಿಶ್ವ ಹಿಂದೂ ಪರಿಷತ್ತಿನ ಮುಖಂಡ ಶರಣ್ ಪಂಪ್ ವೆಲ್ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಾಗಿದೆ.

ಕುಂಜಾಲುವಿನಲ್ಲಿ ನಡೆದ ಗೋ ಹತ್ಯೆಯ ಪ್ರಕರಣದ ತನಿಖೆ ಪೂರ್ಣಗೊಳ್ಳುವ ಮೊದಲೇ, ಆರೋಪಿ ಶರಣ್ ಪಂಪ್ ವೆಲ್ ಪತ್ರಿಕಾಗೋಷ್ಠಿಯಲ್ಲಿ ಸಾರ್ವಜನಿಕ ಶಾಂತಿ-ಸುವ್ಯವಸ್ಥೆಗೆ ಭಂಗ ತರುವ ಸುಳ್ಳು ಮಾಹಿತಿ ನೀಡಿದ್ದರು. ಇದು ಸಾರ್ವಜನಿಕರಲ್ಲಿ ಗಲಭೆ-ಗೊಂದಲ ಉಂಟು ಮಾಡಿ, ಧರ್ಮಗಳ ನಡುವೆ ದ್ವೇಷ ಹುಟ್ಟು ಹಾಕುವಂತಹ ಪ್ರಚೋದನಾಕಾರಿ ಹೇಳಿಕೆ ಆದ್ದರಿಂದ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ.

Related posts

ದುಬೈನ ಫಾರ್ಚ್ಯೂನ್ ಸಂಸ್ಥೆಗೆ 2.5 ಕೋಟಿ ವಂಚಿಸಿ‌ ಬಂಧನಕ್ಕೊಳಗಾಗಿದ್ದ ಆರೋಪಿಯ ಜಾಮೀನು ಅರ್ಜಿ ತಿರಸ್ಕೃತ

Udupilive News

ಉಡುಪಿ ಪತ್ರಕರ್ತರ ಸಂಘದಿಂದ ಸ್ವಾತಂತ್ರೋತ್ಸವ ದಿನಾಚರಣೆ

Udupilive News

ನ.9ರಂದು ಉಡುಪಿಯಲ್ಲಿ “ನನ್ನ ನಾಡು ನನ್ನ ಹಾಡು” ಜಿಲ್ಲಾಮಟ್ಟದ ಕನ್ನಡ ಹಾಡುಗಳ ಸ್ಪರ್ಧೆ

Udupilive News

Leave a Comment