ಉಡುಪಿ

ಪೆರಂಪಳ್ಳಿ ಚರ್ಚಿಗೆ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಸೌಹಾರ್ದ ಭೇಟಿ

ಮಣಿಪಾಲ: ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರು ಶನಿವಾರ ಪೆರಂಪಳ್ಳಿ ಫಾತಿಮಾ ಮಾತೆ ಚರ್ಚಿಗೆ ಸೌಹಾರ್ದ ಭೇಟಿ ನೀಡಿ ಚರ್ಚಿನ ಧರ್ಮಗುರುಗಳೊಂದಿಗೆ ಮಾಹಿತಿ ಪಡೆದರು.

ಚರ್ಚಿನ ಇತಿಹಾಸ, ಕ್ರೈಸ್ತ ಸಮುದಾಯದ ವಿವರ ಹಾಗೂ ಚರ್ಚ್ ಕಟ್ಟಡದ ಐತಿಹಾಸಿಕ ವಿನ್ಯಾಸದ ಕುರಿತು ಮಾಹಿತಿ ಪಡೆದ ವರಿಷ್ಠಾಧಿಕಾರಿಗಳು ಕ್ರೈಸ್ತ ಸಮುದಾಯಕ್ಕೆ ಅಗತ್ಯವಿರುವ ಎಲ್ಲಾ ಕಾನೂನಾತ್ಮಕ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಈ ವೇಳೆ ಚರ್ಚಿನ ಪ್ರಧಾನ ಧರ್ಮಗುರು ವಂ|ವಿಶಾಲ್ ಲೋಬೊ, ಮಣಿಪಾಲ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ಉಪಸ್ಥಿತರಿದ್ದರು.

Related posts

ಖಾರ್ವಿಕೇರಿ ದೇವಸ್ಥಾನದ ಚಿನ್ನಾಭರಣ ಕಳ್ಳತನ- ದೇವಸ್ಥಾನದ ಅರ್ಚಕ ಬಂಧನ ,20 ಲಕ್ಷ ಮೌಲ್ಯದ ಚಿನ್ನಾಭರಣ ವಶ

Udupilive News

ಶಂಕರಪುರದ ಅನಿಲ್ ಕುಮಾರ್ ರವರಿಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Udupilive News

ಮಣಿಪಾಲ: ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ, ಪೊಲೀಸರಿಂದ ದಾಳಿ – ಬಿಹಾರ ಮೂಲದ ಆರೋಪಿ ಬಂಧನ.

Udupilive News

Leave a Comment