ಉಡುಪಿಕಾರ್ಕಳ

ಮುದ್ರಾಡಿ ಧರ್ಮಯೋಗಿ ಮೋಹನ್‌ ಸ್ವಾಮೀಜಿಯವರ ೪ನೇ ಆರಾಧನಾ ಮಹೋತ್ಸವ. ಶ್ರೀ ವಿನಯ್‌ ಗುರೂಜಿ ಅವರಿಗೆ ಧರ್ಮಯೋಗಿ ಸಮ್ಮಾನ

ಮುದ್ರಾಡಿ : ಶ್ರೀ ಕ್ಷೇತ್ರ ಮುದ್ರಾಡಿ ಅಭಯಹಸ್ತೆ ಶ್ರೀ ಆದಿಶಕ್ತಿ ಮತ್ತು ನಂದಿಕೇಶ್ವರ ದೇವಸ್ಥಾನದಲ್ಲಿ ಜುಲೈ ೮ರಂದು ಧರ್ಮಯೋಗಿ ಮೋಹನ ಸ್ವಾಮೀಜಿಯವರ ೪ನೇ ವರ್ಷದ ಆರಾಧನಾ ಮಹೋತ್ಸವ ನಡೆಯಲಿದೆ. ಚಿಕ್ಕಮಗಳೂರಿನ ಕೆ.ಎಸ್.ನಿತ್ಯಾನಂದ ಸ್ವಾಮೀಜಿ ಮಾರ್ಗದರ್ಶನದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳು ನಡೆಯಲಿದೆ. ಭಜನಾ ಕಾರ್ಯಕ್ರಮ, ಪಟ್ಲ ಸತೀಶ ಶೆಟ್ಟಿ ಬಳಗದವರಿಂದ ಯಕ್ಷಗಾನ ತಾಳಮದ್ದಳೆ ಅಂಗದ ಸಂಧಾನ ನಡೆಯಲಿದೆ. ಕಲಾವಿದರಾದ ಉಜಿರೆ ಅಶೋಕ ಭಟ್‌ ಮತ್ತು ಗಣೇಶ ಶೆಟ್ಟಿ ಕನ್ನಡಿಕಟ್ಟೆ ಭಾಗವಹಿಸುವರು.
……
ಶ್ರೀ ವಿನಯ್‌ ಗುರೂಜಿ ಅವರಿಗೆ ಧರ್ಮಯೋಗಿ ಸಮ್ಮಾನ ಪ್ರದಾನ :
ಹೆಬ್ರಿ : ಮುದ್ರಾಡಿ ಧರ್ಮಯೋಗಿ ಮೋಹನ್‌ ಸ್ವಾಮೀಜಿಯವರ ೪ನೇ ಆರಾಧನಾ ಮಹೋತ್ಸವದಲ್ಲಿ ಮೋಹನ್‌ ಸ್ವಾಮೀಜಿಯವರ ಸಂಸ್ಮರಣೆಗಾಗಿ ನೀಡುವ ಧರ್ಮಯೋಗಿ ಸಮ್ಮಾನ ಗೌರವವನ್ನು ಶ್ರೀ ವಿನಯ್‌ ಗುರೂಜಿ ಅವರಿಗೆ ಪ್ರದಾನ ಮಾಡಲಾಗುತ್ತದೆ. ಬಜಗೋಳಿ ರವೀಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸುವರು. ಶ್ರೀ ಕ್ಷೇತ್ರ ಮುದ್ರಾಡಿಯ ಕಮಲ ಎಂಪಿ, ಮುಖಂಡ ಮುದ್ರಾಡಿ ಮಂಜುನಾಥ ಪೂಜಾರಿ, ರಂಗ ನಿರ್ದೇಶಕ ಜಗದೀಶ ಜಾಲ ಉಪಸ್ಥಿತರಿರುವರು ಎಂದು ಶ್ರೀ ಕ್ಷೇತ್ರ ಮುದ್ರಾಡಿಯ ಧರ್ಮಾದಿಕಾರಿ ವಿಜಯಕೀರ್ತಿ ಸುಕುಮಾರ ಮೋಹನ್‌ ತಿಳಿಸಿದ್ದಾರೆ.

Related posts

ಸಹಕಾರ ಭಾರತಿ,ಉಡುಪಿ ಜಿಲ್ಲೆಯ ನೂತನ ಅಧ್ಯಕ್ಷರಾಗಿ ದಿನೇಶ್ ಹೆಗ್ಡೆ ಆತ್ರಾಡಿ ಆಯ್ಕೆ.

Udupilive News

79 ನೇ ಸ್ವಾಂತಂತ್ಯ್ರ ದಿನಾಚರಣೆ.ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದ ಉಸ್ತುವರಿ ಸಚಿವರು.

Udupilive News

ಮಣಿಪಾಲ:ನಕಲಿ ಪರವಾನಿಗೆ ಬಳಸಿದ ಆರೋಪ – ಕ್ರಷರ್ ಮಾಲಕಿ ವಿರುದ್ಧ ಪ್ರಕರಣ

Udupilive News

Leave a Comment