ಉಡುಪಿಕಾರ್ಕಳ

ಮುದ್ರಾಡಿ ಧರ್ಮಯೋಗಿ ಮೋಹನ್‌ ಸ್ವಾಮೀಜಿಯವರ ೪ನೇ ಆರಾಧನಾ ಮಹೋತ್ಸವ. ಶ್ರೀ ವಿನಯ್‌ ಗುರೂಜಿ ಅವರಿಗೆ ಧರ್ಮಯೋಗಿ ಸಮ್ಮಾನ

ಮುದ್ರಾಡಿ : ಶ್ರೀ ಕ್ಷೇತ್ರ ಮುದ್ರಾಡಿ ಅಭಯಹಸ್ತೆ ಶ್ರೀ ಆದಿಶಕ್ತಿ ಮತ್ತು ನಂದಿಕೇಶ್ವರ ದೇವಸ್ಥಾನದಲ್ಲಿ ಜುಲೈ ೮ರಂದು ಧರ್ಮಯೋಗಿ ಮೋಹನ ಸ್ವಾಮೀಜಿಯವರ ೪ನೇ ವರ್ಷದ ಆರಾಧನಾ ಮಹೋತ್ಸವ ನಡೆಯಲಿದೆ. ಚಿಕ್ಕಮಗಳೂರಿನ ಕೆ.ಎಸ್.ನಿತ್ಯಾನಂದ ಸ್ವಾಮೀಜಿ ಮಾರ್ಗದರ್ಶನದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳು ನಡೆಯಲಿದೆ. ಭಜನಾ ಕಾರ್ಯಕ್ರಮ, ಪಟ್ಲ ಸತೀಶ ಶೆಟ್ಟಿ ಬಳಗದವರಿಂದ ಯಕ್ಷಗಾನ ತಾಳಮದ್ದಳೆ ಅಂಗದ ಸಂಧಾನ ನಡೆಯಲಿದೆ. ಕಲಾವಿದರಾದ ಉಜಿರೆ ಅಶೋಕ ಭಟ್‌ ಮತ್ತು ಗಣೇಶ ಶೆಟ್ಟಿ ಕನ್ನಡಿಕಟ್ಟೆ ಭಾಗವಹಿಸುವರು.
……
ಶ್ರೀ ವಿನಯ್‌ ಗುರೂಜಿ ಅವರಿಗೆ ಧರ್ಮಯೋಗಿ ಸಮ್ಮಾನ ಪ್ರದಾನ :
ಹೆಬ್ರಿ : ಮುದ್ರಾಡಿ ಧರ್ಮಯೋಗಿ ಮೋಹನ್‌ ಸ್ವಾಮೀಜಿಯವರ ೪ನೇ ಆರಾಧನಾ ಮಹೋತ್ಸವದಲ್ಲಿ ಮೋಹನ್‌ ಸ್ವಾಮೀಜಿಯವರ ಸಂಸ್ಮರಣೆಗಾಗಿ ನೀಡುವ ಧರ್ಮಯೋಗಿ ಸಮ್ಮಾನ ಗೌರವವನ್ನು ಶ್ರೀ ವಿನಯ್‌ ಗುರೂಜಿ ಅವರಿಗೆ ಪ್ರದಾನ ಮಾಡಲಾಗುತ್ತದೆ. ಬಜಗೋಳಿ ರವೀಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸುವರು. ಶ್ರೀ ಕ್ಷೇತ್ರ ಮುದ್ರಾಡಿಯ ಕಮಲ ಎಂಪಿ, ಮುಖಂಡ ಮುದ್ರಾಡಿ ಮಂಜುನಾಥ ಪೂಜಾರಿ, ರಂಗ ನಿರ್ದೇಶಕ ಜಗದೀಶ ಜಾಲ ಉಪಸ್ಥಿತರಿರುವರು ಎಂದು ಶ್ರೀ ಕ್ಷೇತ್ರ ಮುದ್ರಾಡಿಯ ಧರ್ಮಾದಿಕಾರಿ ವಿಜಯಕೀರ್ತಿ ಸುಕುಮಾರ ಮೋಹನ್‌ ತಿಳಿಸಿದ್ದಾರೆ.

Related posts

ಪೆರ್ಡೂರು ಅಡಪಾಡಿಯಲ್ಲಿ ಅಕ್ರಮ ಮರಳುಗಾರಿಕೆ.ದೂರು ಕೊಟ್ಟರೂ ಕ್ರಮ ಕೈ ಗೊಳ್ಳದ ಗಣಿ ಇಲಾಖೆ.

Udupilive News

ಶಾಂತಿ ಸೌಹರ್ದೆತೆ ತವರೂರಲ್ಲಿ ಬೆಂಕಿ ಹಚ್ಚೋ ಕೆಲಸ ಮಾಡದಿರಿ.ಶರಣ್ ಪಂಪ್ ವೆಲ್ ವಿರುದ್ದ ಕಿಡಿ ಕಾರಿದ ಪ್ರಸಾದ್ ರಾಜ್ ಕಾಂಚನ್.

Udupilive News

ಸುರತ್ಕಲ್: “ನಿನ್ನನ್ನು 24 ತುಂಡು ಮಾಡುವೆ” ಎಂದು ಬೆದರಿಕೆ; ಯುವತಿ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ – ಆರೋಪಿ ಬಂಧನ .

Udupilive News

Leave a Comment