ಉಡುಪಿ

ಕೊಲ್ಲೂರು ಉಡುಪಿ ಧರ್ಮಸ್ಥಳ ಕ್ಷೇತ್ರ ಗಳ ಬಗ್ಗೆ ಅವಹೇಳನಕಾರಿ ವಿಡಿಯೋ ,ನಗರ ಠಾಣೆಯಲ್ಲಿ ಎಫ್ ಐ ಅರ್

ಉಡುಪಿ: ಧಾರ್ಮಿಕ ಭಾವನೆಗಳಿಗೆ ಧಕ್ಕೆ ,ಪವಿತ್ರ ಕ್ಷೇತ್ರಗಳಾದ ಉಡುಪಿ ಕೊಲ್ಲೂರು ಧರ್ಮಸ್ಥಳ ಕ್ಷೇತ್ರಗಳ ಬಗ್ಗೆ ಅವಹೇಳನಕರವಾಗಿ ವಿಡಿಯೋ ಮಾಡಿ ಹರಿಯಬಿಟ್ಟ ಕೇರಳದ ಎರಡು ವ್ಯಕ್ತಿಗಳ ಮೇಲೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಉಡುಪಿ ಹಿರಿಯಡ್ಕ ಬೆಳ್ಳರ ಪಾಡಿ ನಿವಾಸಿ ಶ್ರೀ‌ಕುಮಾರ್ ಎನ್ನುವವರು ಉಡುಪಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮಲ್ಲು ಮಾರ್ಟ್ ಟ್ರಾವೆಲರ್ ಮತ್ತು ಮಾನಫ್ ಎನ್ನುವ ವ್ಯಕ್ತಿ ಫೆಸ್ ಬುಕ್ ಹಾಗೂ ಯ್ಯೂಟ್ಯೂಬ್ ಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ,ಉಡುಪಿ ಕೊಲ್ಲೂರು ಕ್ಷೇತ್ರ ಗಳ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆಗಳನ್ನು ನೀಡಿ ವಿಡಿಯೋ ಅಪ್ ಲೋಡ್ ಮಾಡಿರುತ್ತಾನೆ.

ಕುಟುಂಬ ಸಮೇತರಾಗಿ ಉಡುಪಿ ಮಂಗಳೂರು ಧಾರ್ಮಿಕ ಕ್ಷೇತ್ರಗಳಿಗೆ ಹೆಣ್ಣು ಮಕ್ಕಳೊಂದಿಗೆ ಹೋಗಬೇಡಿ. ಹೆಣ್ಣು ಮಕ್ಕಳು ಸುರಕ್ಷಿತವಲ್ಲ,ಎಲ್ಲಾ ಕ್ಷೇತ್ರಗಳಲ್ಲೂ ಕೊಡಚಾದ್ರಿಯಲ್ಲೂ ಇಂತಹ ಪ್ರಕರಣ ಅಗಿರಬಹುದು ಎಂದೆಲ್ಲಾ ಹೇಳಿಕೆ ನೀಡಿದ್ದು,ಇದು ನಮ್ಮ ಧಾರ್ಮಿಕ ಭಾವನೆಗಳಿಗೆ ದಕ್ಕೆ ತರುವ ಹೇಳಿಕೆಗಳಾಗಿದ್ದು,ಪೊಲೀಸ್ ಇಲಾಖೆ ತಕ್ಷಣ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದು ,ನಗರ ಠಾಣೆಯಲ್ಲಿ ಎಫ್ ಐ ಅರ್ ದಾಖಲಾಗಿದೆ.

Related posts

ಛತ್ತೀಸ್ ಗಢದಲ್ಲಿ ಕ್ರೈಸ್ತ ಧರ್ಮ ಭಗಿನಿಯರ ಮೇಲಿನ ದೌರ್ಜನ್ಯ ಖಂಡಿಸಿ ಉಡುಪಿಯಲ್ಲಿ ಬೃಹತ್ ಪ್ರತಿಭಟನೆ

Udupilive News

ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಡುಪಿ ಜಿಲ್ಲೆಯ 20 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ

Udupilive News

ಉಡುಪಿಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ; ಧ್ವಜಾರೋಹಣ ನೆರವೇರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Udupilive News

Leave a Comment