ಉಡುಪಿಕುಂದಾಪುರಬೈಂದೂರುಬ್ರಹ್ಮಾವರಹೆಬ್ರಿ

ಹೊಸಂಗಡಿ: ಅಕ್ರಮ‌ ಗೋಸಾಗಾಟಗರರನ್ನು ಬಂಧಿಸಿದ ಪೊಲೀಸರು.

ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನಲ್ಲಿ ಅಕ್ರಮ ಗೋಸಾಗಾಟ ನಡೆಸುತ್ತಿದ್ದವರನ್ನು ಬಂಧಿಸಲಾಗಿದೆ.ಇಲ್ಲಿನ ಹೊಸಂಗಡಿ ಗ್ರಾಮದ ಮುತ್ತಿನಕಟ್ಟೆಯ ಬಳಿಯ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ಕರ್ತವ್ಯಗಳಿದ್ದಾಗ ಸಂಶಯಾಸ್ಪದ ವಾಹನ ಪತ್ತೆಯಾಗಿದೆ.

ಬೆಳಿಗ್ಗೆ ಸುಮಾರು ಆರು ಗಂಟೆಗೆ ಹುಲಿಕಲ್ ಘಾಟಿ ಕಡೆಯಿಂದ ಚೆಕ್ ಪೊಸ್ಟ್ ಕಡೆಗೆ ಬರುತ್ತಿದ್ದ ವಾಹನವನ್ನು ನೋಡಿ ನಿಲ್ಲುವಂತೆ ಚಾಲಕನಿಗೆ ಸೂಚನೆ ನೀಡಿದ್ದಾರೆ. ವಾಹನವನ್ನು ತಪಾಸಣೆ ಮಾಡಿದಾಗ ಹಿಂದುಗಡೆ ಎರಡು ಕೋಣಗಳಿಗೆ ಯಾವುದೇ ಮೇವು ಆಹಾರ ನೀಡದೆ ಸಾಗಿಸುತ್ತಿರುವುದು ಗೊತ್ತಾಗಿದೆ. ಇವುಗಳನ್ನು ಹಿಂಸ್ಮಾಕವಾಗಿ ಕಟ್ಟಿ ಹಾಕಿ ತುಂಬಿರುವುದು ಕಂಡು ಬಂದಿದೆ.

ಚಾಲಕನಲ್ಲಿ ಈ ಬಗ್ಗೆ ವಿಚಾರಿಸಿದಾಗ ಜಾನುವಾರುಗಳನ್ನ ಮಾಂಸ ಮಾಡುವ ಉದ್ದೇಶ ದಿಂದ ವಧೆಗಾಗಿ ಕೊಂಡು ಹೋಗುತ್ತೀರುವುದಾಗಿ ತಿಳಿಸಿರುತ್ತಾರೆ. ಎರಡು ಕೋಣಗಳ ಅಂದಾಜು ಮೌಲ್ಯ 30,000/- ಮತ್ತು ವಾಹನದ ಮೌಲ್ಯ 04 ಲಕ್ಷರೂಪಾಯಿಗಳಾಗಬಹುದೆಂದು ಅಂದಾಜಿಸಲಾಗಿದೆ .

ಆರೋಪಿ ಬಸವರಾಜ, ಲೋಹಿತ್ ಇಮ್ರಾನ್ ರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ.

.

Related posts

ಸಹಕಾರ ಭಾರತಿ,ಉಡುಪಿ ಜಿಲ್ಲೆಯ ನೂತನ ಅಧ್ಯಕ್ಷರಾಗಿ ದಿನೇಶ್ ಹೆಗ್ಡೆ ಆತ್ರಾಡಿ ಆಯ್ಕೆ.

Udupilive News

ರಸ್ತೆ ಹೊಂಡ ಮಧ್ಯೆ ಬಾಳೆ ಗಿಡ ಇಟ್ಟು ಆಕ್ರೋಶ.ಶಿರ್ವ ಕಟಪಾಡಿ ರಸ್ತೆ ದುರವಸ್ಥೆಗೆ ಬೇಸತ್ತ ಜನ.

Udupilive News

ಉಡುಪಿ ನಗರ ಮದ್ಯೆ ಕತ್ತು ಸೀಳಿ ಸ್ನೆಹಿತನ ಕೊಲೆ.

Udupilive News

Leave a Comment