ಉಡುಪಿ: ಗಾಂಜಾ ಮಾರಾಟ ಮಾಡುತ್ತಿದ್ದವರನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ.
ಪಡುತೋನ್ಸೆ ಗ್ರಾಮದ ಗುಜ್ಜರಬೆಟ್ಟು ಶ್ರೀ ಬೊಬ್ಬರ್ಯ ದೈವಸ್ಥಾನದ ಬಳಿ, ನಾಲ್ಕು ಮಂದಿ ಗಾಂಜಾ ಮಾರಾಟ ಮಾಡುತ್ತಿರುವುದಾಗಿ ದೂರು ಬಂದಿತ್ತು. ಪೊಲೀಸರು ದಾಳಿ ನಡೆಸಿದಾಗ, ತಪ್ಪಿಸಿಕೊಳ್ಳಲು ಮುಂದಾಗಿದ್ದಾರೆ
. ಈ ಪೈಕಿ ಮೂವರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತ ರನ್ನು ಅಚ್ಯುತ್, ಪುನೀತ್, ಚಂದ್ರಕಾಂತ ಎಂದು ಗುರುತಿಸಲಾಗಿದೆ. ಈ ತಂಡದಲ್ಲಿದ್ದ ಕಿಶೋರ್ ಎಂಬಂತ ಓಡಿ ತಪ್ಪಿಸಿಕೊಂಡಿದ್ದಾನೆ.
ಬೈಕ್ ನ ಪರೀಕ್ಷೆ ನಡೆಸಿದಾಗ ಗಾಂಜಾ ಮತ್ತು ಎಂ ಡಿ ಎಂ ಎ ಪ್ಯಾಕೆಟ್ಗಳು ಪತ್ತೆಯಾಗಿವೆ. ಗಾಂಜಾ ಬೈಕ್ ಸರಿದಂತೆ ಒಟ್ಟು ಒಂದುವರೆ ಲಕ್ಷ ಮೌಲ್ಯದ ಸತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಪ್ರಕರಣದ ಬಗ್ಗೆ ಮಲ್ಪೆ ಠಾಣೆಯಲ್ಲಿ ದೂರು ದಾಖಲಾಗಿದೆ.
