ಉಡುಪಿಕಾಪುಕಾರ್ಕಳಕುಂದಾಪುರಬೈಂದೂರುಬ್ರಹ್ಮಾವರಹೆಬ್ರಿ

ಉಡುಪಿ: ಬೇಟೆಗಾಗಿ ಗುಂಡು ಹಾರಿಸಿದ ಇಬ್ಬರು ಆರೋಪಿಗಳ ಬಂಧನ

ಉಡುಪಿ: ಬೇಟೆಯ ವೇಳೆ ಬಂದೂಕಿನಿಂದ ಹಾರಿದ ಗುಂಡು ಕಾರು ಮತ್ತು ಮನೆ ಬಾಗಿಲಿಗೆ ಬಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಹಿರಿಯಡಕ ಪೊಲೀಸರು ಬಂಧಿಸಿದ್ದಾರೆ.
ಕುದಿ ಗ್ರಾಮದ ಕೊಂಡಾಡಿಯ ಪ್ರದೀಪ್ (32) ಹಾಗೂ ಹಿರಿಯಡ್ಕ ಗುಡ್ಡೆಯಂಗಡಿಯ ಮನೋಜ್ (25) ಬಂಧಿತ ಆರೋಪಿಗಳೆಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರು ಹಿರಿಯಡಕ ಕಣಜಾರು ಗುರುರಾಜ್ ಮಂಜಿತ್ತಾಯರ ಮನೆಯ ಸಮೀಪದ ಹಾಡಿಯ ಬಳಿ ಶಿಕಾರಿ ಮಾಡುವ ಉದ್ದೇಶದಿಂದ ಹೋಗಿದ್ದರು. ಈ ವೇಳೆ ಬಂದೂಕಿನಿಂದ ಹಾರಿದ ಗುಂಡು ಕಾರಿನ ಗಾಜಿಗೆ ತಾಗಿ, ಮರದ ಬಾಗಿಲಿಗೆ ಬಡಿದಿದೆ.


ಬಂಧಿತರಿಂದ 50 ಸಾವಿರ ರೂ. ಮೌಲ್ಯದ ಪರವಾನಿಗೆರಹಿತ ತೋಟೆ ಕೋವಿ, ಏಳು ತೋಟೆಗಳು ಹಾಗೂ 40 ಸಾವಿರ ರೂ. ಮೌಲ್ಯದ ಬೈಕ್ ವಶಪಡಿಸಿಕೊಳ್ಳಲಾಗಿದೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Related posts

ಮುದ್ರಾಡಿ ಧರ್ಮಯೋಗಿ ಮೋಹನ್‌ ಸ್ವಾಮೀಜಿಯವರ ೪ನೇ ಆರಾಧನಾ ಮಹೋತ್ಸವ. ಶ್ರೀ ವಿನಯ್‌ ಗುರೂಜಿ ಅವರಿಗೆ ಧರ್ಮಯೋಗಿ ಸಮ್ಮಾನ

Udupilive News

ವೆಲ್ಫೇರ್ ಪಾರ್ಟಿ ಉಡುಪಿ ಜಿಲ್ಲಾಧ್ಯಕ್ಷರಾಗಿ ಇದ್ರಿಸ್ ಹೂಡೆ ಅಯ್ಕೆ

Udupilive News

ಕೊಕ್ಕರ್ಣೆಯಲ್ಲಿ ಸತ್ಯನಾಥ ಸ್ಟೋರ್ಸ್’ನ ನೂತನ ಶಾಖೆ ಉದ್ಘಾಟನೆ

Udupilive News

Leave a Comment