ಉಡುಪಿಕಾಪುಕಾರ್ಕಳಕುಂದಾಪುರಬೈಂದೂರುಬ್ರಹ್ಮಾವರಹೆಬ್ರಿ

ಉಡುಪಿ: ಬೇಟೆಗಾಗಿ ಗುಂಡು ಹಾರಿಸಿದ ಇಬ್ಬರು ಆರೋಪಿಗಳ ಬಂಧನ

ಉಡುಪಿ: ಬೇಟೆಯ ವೇಳೆ ಬಂದೂಕಿನಿಂದ ಹಾರಿದ ಗುಂಡು ಕಾರು ಮತ್ತು ಮನೆ ಬಾಗಿಲಿಗೆ ಬಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಹಿರಿಯಡಕ ಪೊಲೀಸರು ಬಂಧಿಸಿದ್ದಾರೆ.
ಕುದಿ ಗ್ರಾಮದ ಕೊಂಡಾಡಿಯ ಪ್ರದೀಪ್ (32) ಹಾಗೂ ಹಿರಿಯಡ್ಕ ಗುಡ್ಡೆಯಂಗಡಿಯ ಮನೋಜ್ (25) ಬಂಧಿತ ಆರೋಪಿಗಳೆಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರು ಹಿರಿಯಡಕ ಕಣಜಾರು ಗುರುರಾಜ್ ಮಂಜಿತ್ತಾಯರ ಮನೆಯ ಸಮೀಪದ ಹಾಡಿಯ ಬಳಿ ಶಿಕಾರಿ ಮಾಡುವ ಉದ್ದೇಶದಿಂದ ಹೋಗಿದ್ದರು. ಈ ವೇಳೆ ಬಂದೂಕಿನಿಂದ ಹಾರಿದ ಗುಂಡು ಕಾರಿನ ಗಾಜಿಗೆ ತಾಗಿ, ಮರದ ಬಾಗಿಲಿಗೆ ಬಡಿದಿದೆ.


ಬಂಧಿತರಿಂದ 50 ಸಾವಿರ ರೂ. ಮೌಲ್ಯದ ಪರವಾನಿಗೆರಹಿತ ತೋಟೆ ಕೋವಿ, ಏಳು ತೋಟೆಗಳು ಹಾಗೂ 40 ಸಾವಿರ ರೂ. ಮೌಲ್ಯದ ಬೈಕ್ ವಶಪಡಿಸಿಕೊಳ್ಳಲಾಗಿದೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Related posts

ಉಡುಪಿ ಆದಿಶಕ್ತಿ ಹೂವಿನ ಅಂಗಡಿಯ ಮಾಲೀಕ ಸುಧಾಕರ ಶೇರಿಗಾರ್ ನಿಧನ

Udupilive News

ಪಂಚಾಯತ್ ರಾಜ್ ಇಲಾಖೆಯ ಆಡಳಿತ ಸ್ಥಗಿತ ಮುಖ್ಯಮಂತ್ರಿಗಳ ಮಧ್ಯಪ್ರವೇಶಕ್ಕೆ ಕೋಟ ಒತ್ತಾಯ

Udupilive News

ಉಡುಪಿ: ಜೂ‌ನ್ 15ರಂದು ನೇತ್ರದಾನ- ನೇತ್ರದಾನ ಜಾಗೃತಿ ಶಿಬಿರ

Udupilive News

Leave a Comment