ಉಡುಪಿ

ಹುಟ್ಟು ಹಬ್ಬದಂತೆ ಯುವತಿಗೆ ಚಾಕುವಿನಿಂದ ಇರಿದು ಪರಾರಿ.ಕೊಕ್ಕರ್ಣೆಯಲ್ಲಿ ಘಟನೆ.

ಬ್ರಹ್ಮಾವರ: ಇಲ್ಲಿನ ಕೊಕ್ಕರ್ಣೆಯಲ್ಲಿ ಪ್ರೇಮಿಯೊಬ್ಬ ಯುವತಿಯನ್ನು ಚಾಕುವಿನಲ್ಲಿ ಚುಚ್ಚಿ ಹತ್ಯೆಗೆ ಯತ್ನಿಸಿ ಬೈಕ್ ಬಿಟ್ಟು ಪರಾರಿಯಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ.

ಗಂಭೀರ ಗಾಯಗೊಂಡ ಯುವತಿಯನ್ನು ಕೊಕ್ಕರ್ಣೆ ಪೂಜಾರಿಬೆಟ್ಟು ನಿವಾಸಿ ರಕ್ಷಿತಾ (20) ಎಂದು ಗುರುತಿಸಲಾಗಿದೆ. ಯುವತಿ ಮಣಿಪಾಲದಲ್ಲಿ ಕೆಲಸಕ್ಕೆ ಹೋಗಲೆಂದು ಮನೆಯಿಂದ 8.30ಕ್ಕೆ ಬರುವಾಗ ಕಾರ್ತಿಕ್ ಪೂಜಾರಿ ಎನ್ನುವಾತ ಏಕಾ ಏಕಿ ಬೈಕಿನಲ್ಲಿ ಬಂದು ನೇರವಾಗಿ ಮದುವೆಯಾಗುವಂತೆ ಒತ್ತಾಯಿಸಿದ್ದಾನೆ. ಇದಕ್ಕೆ ಯುವತಿ ನಿರಾಕರಿಸಿದಕ್ಕೆ ಚಾಕುವಿನಿಂದ ಚುಚ್ಚಿ ಪರಾರಿಯಾಗಿದ್ದಾನೆ.

ರಕ್ಷಿತಾಳದ್ದು ಇವತ್ತು ಹುಟ್ಟಿದ ದಿನವಾಗಿದ್ದು ಮದುವೆ ಆಗುವಂತೆ ಒತ್ತಾಯಿಸಿದ್ದಾನೆ. ಇದಕ್ಕೆ ನಿರಾಕರಿಸಿದ್ದಕ್ಕೆ ಯುವತಿಗೆ ಚಾಕು ಚುಚ್ಚಿ ಯುವಕ ಬೈಕ್ ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಬ್ರಹ್ಮಾವರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಅ.9ರಂದು ಉಡುಪಿಯ ಗೀತಾಂಜಲಿ ಸಿಲ್ಕ್ಸ್’ನಲ್ಲಿ ನವೀಕೃತ ಪುರುಷರ ವಿಭಾಗದ ಉದ್ಘಾಟನೆ ಸ್ವದೇಶಿ-ವಿದೇಶಿಯ ಎಲ್ಲ ಪ್ರಮುಖ ಬ್ರಾಂಡ್ ಗಳು ಲಭ್ಯ

Udupilive News

ರೀಲ್ಸ್ ಹುಚ್ಚು, ಪತ್ನಿಯನ್ನು ಕತ್ತಿಯಿಂದ ಕಡಿದು ಕೊಲೆ.

Udupilive News

ಇಂದ್ರಾಳಿ ರೈಲ್ವೆ ನಿಲ್ದಾಣಕ್ಕೆ ಸಿಟಿ ಬಸ್ ಸಂಚಾರ ವ್ಯವಸ್ಥೆ, ಜಿಲ್ಲಾಧಿಕಾರಿಗೆ ಮನವಿ

Udupilive News

Leave a Comment