ಉಡುಪಿ

ಹುಟ್ಟು ಹಬ್ಬದಂತೆ ಯುವತಿಗೆ ಚಾಕುವಿನಿಂದ ಇರಿದು ಪರಾರಿ.ಕೊಕ್ಕರ್ಣೆಯಲ್ಲಿ ಘಟನೆ.

ಬ್ರಹ್ಮಾವರ: ಇಲ್ಲಿನ ಕೊಕ್ಕರ್ಣೆಯಲ್ಲಿ ಪ್ರೇಮಿಯೊಬ್ಬ ಯುವತಿಯನ್ನು ಚಾಕುವಿನಲ್ಲಿ ಚುಚ್ಚಿ ಹತ್ಯೆಗೆ ಯತ್ನಿಸಿ ಬೈಕ್ ಬಿಟ್ಟು ಪರಾರಿಯಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ.

ಗಂಭೀರ ಗಾಯಗೊಂಡ ಯುವತಿಯನ್ನು ಕೊಕ್ಕರ್ಣೆ ಪೂಜಾರಿಬೆಟ್ಟು ನಿವಾಸಿ ರಕ್ಷಿತಾ (20) ಎಂದು ಗುರುತಿಸಲಾಗಿದೆ. ಯುವತಿ ಮಣಿಪಾಲದಲ್ಲಿ ಕೆಲಸಕ್ಕೆ ಹೋಗಲೆಂದು ಮನೆಯಿಂದ 8.30ಕ್ಕೆ ಬರುವಾಗ ಕಾರ್ತಿಕ್ ಪೂಜಾರಿ ಎನ್ನುವಾತ ಏಕಾ ಏಕಿ ಬೈಕಿನಲ್ಲಿ ಬಂದು ನೇರವಾಗಿ ಮದುವೆಯಾಗುವಂತೆ ಒತ್ತಾಯಿಸಿದ್ದಾನೆ. ಇದಕ್ಕೆ ಯುವತಿ ನಿರಾಕರಿಸಿದಕ್ಕೆ ಚಾಕುವಿನಿಂದ ಚುಚ್ಚಿ ಪರಾರಿಯಾಗಿದ್ದಾನೆ.

ರಕ್ಷಿತಾಳದ್ದು ಇವತ್ತು ಹುಟ್ಟಿದ ದಿನವಾಗಿದ್ದು ಮದುವೆ ಆಗುವಂತೆ ಒತ್ತಾಯಿಸಿದ್ದಾನೆ. ಇದಕ್ಕೆ ನಿರಾಕರಿಸಿದ್ದಕ್ಕೆ ಯುವತಿಗೆ ಚಾಕು ಚುಚ್ಚಿ ಯುವಕ ಬೈಕ್ ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಬ್ರಹ್ಮಾವರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಉಡುಪಿಯಲ್ಲಿ ಲವ್ ಜಿಹಾದ್? ಇಸ್ಲಾಂಗೆ ಕನ್ವರ್ಟ್ ಆಗುವಂತೆ ವಿದ್ಯಾರ್ಥಿನಿಗೆ ಕಿರುಕುಳ ಆರೋಪ : ವೈದ್ಯ ಅರೆಸ್ಟ್!

Udupilive News

ಮಣಿಪಾಲ: ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ, ಪೊಲೀಸರಿಂದ ದಾಳಿ – ಬಿಹಾರ ಮೂಲದ ಆರೋಪಿ ಬಂಧನ.

Udupilive News

ವೆಲ್ಫೇರ್ ಪಾರ್ಟಿ ಉಡುಪಿ ಜಿಲ್ಲಾಧ್ಯಕ್ಷರಾಗಿ ಇದ್ರಿಸ್ ಹೂಡೆ ಅಯ್ಕೆ

Udupilive News

Leave a Comment